





ಬಜ್ಪೆ: ಮೇಯಲು ಬಿಟ್ಟಿದ್ದ ದನಗಳನ್ನು ಕಳವುಗೈದು ಮಾಂಸ ಮಾಡಿದ್ದ ಪ್ರಕರಣ ಸಂಬಂಧ ಬಟ್ಟೆ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಸೊತ್ತುಗಳ ಸಹಿತ ಇನ್ನರನ್ನು ಬಂಧಿಸಿದ್ದಾರೆ.ಮೂಡುಬಿದಿರೆ ತಾಲೂಕಿನ ಕರಿಂಜೆಗ್ರಾಮ ಸುವರ್ಣ ನಗರ ನಿವಾಸಿ ಮುಹಮ್ಮದ್ ರಫೀಕ್ (31), ಕಲ್ಲಬೆಟ್ಟು ಗ್ರಾಮದ ನಿವಾಸಿ ಶೌಕತ್ ಅಲಿ ಯಾನೆ ಶೌಕತ್ (34) ಬಂಧಿತರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಬಂಧಿತರಿಂದ ದನಕಳವಿಗೆ ಬಳಸಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ ರಿಡ್ಜ್ ಕಾರು ಹಾಗೂ ಕೃತ್ಯಕ್ಕೆ ಬಳಸಿದ್ದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಆರೋಪಿತರ ವಿರುದ್ಧ ಮೂಡುಬಿದ್ರೆ ಪೊಲೀನ್ ಠಾಣೆ, ಉಡುಪಿಯ ಅಜೇಕಾರು, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ದನ ಕಳವಿಗೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಬಜ್ಜೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಎಡಪದವು ಗ್ರಾಮ, ಪಂಚಾಯತ ಕಚೇರಿ ಬಳಿ ಮತ್ತು ತೆಂಕ ಎಡಪದವು ಗ್ರಾಮದ ಪದರಂಗಿ ಕೊರ್ಡೇಲ್ ಎಂಬಲ್ಲಿ ಮೇಯಲು ಬಿಟ್ಟ ದನಗಳನ್ನು ಯಾರೋ ಕಳ್ಳರು ಕಾರಿನಲ್ಲಿ ತುಂಬಿಸಿ ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಬಟ್ಟೆ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.ಈ ಸಂಬಂಧ ತನಿಖೆ ನಡೆಸಿದ ಬಗ್ಗೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎನ್. ಅವರು ವಿಶೇಷ ತಂಡವನ್ನು ರಚನೆ ಮಾಡಿ ದನಗಳನ್ನು ಕಳವು ಮಾಡಿ ಕಡಿದು ಮಾಂಸ ಮಾಡಿರುವ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.ಸದ್ಯ ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳಿಗಾಗಿ ಶೋಧಕಾರ್ಯ ಮುಂದುವರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.