Saturday, May 4, 2024
spot_imgspot_img
spot_imgspot_img

ಧರ್ಮಸ್ಥಳ: ಬಸ್ಸಿನಡಿಗೆ ಸಿಲುಕಿ ಅಪರಿಚಿತ ಮಹಿಳೆ ಸಾವು..!

- Advertisement -G L Acharya panikkar
- Advertisement -

ಧರ್ಮಸ್ಥಳ: ಬಸ್ಸಿನಡಿಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆ ಆಕಸ್ಮಿಕವಾಗಿ ಟಯರ್‌ನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಸೇರಿ 8 ಜನ ಮಂಡ್ಯ ಜಿಲ್ಲೆಯ ಮೇಲುಕೋಟೆಯಿಂದ ಧರ್ಮಸ್ಥಳಕ್ಕೆ ಬಂದಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ ಮಹಿಳೆ ಆಕಸ್ಮಿಕವಾಗಿ ಟಯ‌ರ್ ನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಿಳೆಯ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಿದ್ದು, ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!