Tuesday, May 7, 2024
spot_imgspot_img
spot_imgspot_img

ಸಿ.ಎಂ.ಸಿದ್ದರಾಮಯ್ಯ ಮಂಡಿಸಿದ 14ನೇ ಬಜೆಟ್ ನ ಫಲಶೃತಿಯ ಶ್ಲಾಘನೆ; ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿದ ಧರ್ಮಸ್ಥಳದ ಧರ್ಮಾಧಿಕಾರಿ..!!

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರು ಸಂತಸ ವ್ಯಕ್ತಪಡಿಸಿದ್ದು, ‘ಶಕ್ತಿ ಯೋಜನೆಯಿಂದಾಗಿ ಧರ್ಮಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದು, ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಮಂಜುನಾಥ ಸ್ವಾಮಿಗೆ ಸೇವೆ-ಕಾಣಿಕೆ ಸಲ್ಲಿಸುತ್ತಿದ್ದಾರೆ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವಿರೇಂದ್ರ ಹೆಗ್ಗಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಬಜೆಟ್ ಕುರಿತು ಪತ್ರದಲ್ಲಿ ಉಲ್ಲೇಖಿಸಿರುವ ಹೆಗ್ಗಡೆಯವರು, ‘ಧರ್ಮಸ್ಥಳಕ್ಕೆ ಬರುವವರಲ್ಲಿ ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರ್ಯಕ್ರಮ ನೀಡಿದ್ದೀರಿ. ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ’ ಎಂದು ಹೇಳಿದ್ದಾರೆ. ‘ಅವಕಾಶ ಇದ್ದಾಗ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಬೇಕೆಂಬುದು ತಮ್ಮ ಅಪೇಕ್ಷೆ’ ಎಂದೂ ಪತ್ರದಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!