Monday, June 30, 2025
spot_imgspot_img
spot_imgspot_img

ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರದಲ್ಲಿ ವೈದ್ಯನಾಥ, ಮಲರಾಯ ಸಪರಿವಾರ ದೈವಗಳ ಸಾನ್ನಿಧ್ಯವೃದ್ಧಿ ಬ್ರಹ್ಮಕಲಶಾಭಿಷೇಕ ಮತ್ತು ನೇಮೋತ್ಸವ

- Advertisement -
- Advertisement -

ಧರ್ಮವು ಬದುಕಿನ ಸಂವಿಧಾನವಾಗಬೇಕು- ಓಡಿಯೂರು ಶ್ರೀ

ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರದಲ್ಲಿ . 21 ರಿಂದ ಡಿ. 25 ರ ವರೆಗೆ ವೈದ್ಯನಾಥ, ಮಲರಾಯ ಸಪರಿವಾರ ದೈವಗಳ ಸಾನ್ನಿಧ್ಯವೃದ್ಧಿ ಬ್ರಹ್ಮಕಲಶಾಭಿಷೇಕ ಮತ್ತು ನೇಮೋತ್ಸವದ ಮೊದಲ ದಿನದ ಕಾರ್ಯಕ್ರಮದಲ್ಲಿ ಸಂಜೆ ವಿವಿಧ ವೈದಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

ಸಂಜೆ ಧರ್ಮನಗರ ಬಾಲಗೋಕುಲ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ನಂತರ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

ಮುಳಿಯ ಕೇಶವ ಪ್ರಸಾದ್ ನಿಕಟಪೂರ್ವ ಅಧ್ಯಕ್ಷರು, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇವರ ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಮತನಾಡಿ ಧರ್ಮ, ಸಂಸ್ಕೃತಿ ಉಳಿಸಬೇಕು. ಮನಸ್ಸು ವಿಕಾಸವಾಗಬೇಕು. ಧರ್ಮವು ಬದುಕಿನ ಸಂವಿಧಾನವಾಗಬೇಕು. ಜೀವನದ ಸಾರ್ಥಕತೆಗೆ ಶ್ರದ್ಧಾಕೇಂದ್ರ ಜೀರ್ಣೋದ್ಧಾರಗೊಳ್ಳಬೇಕು ಎಂದು ಆಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀಧರ್ ಶೆಟ್ಟಿ ಗುಬ್ಯ ಮೇಗಿನಗುತ್ತು, ಪದ್ಮನಾಭ ಕೊಂಕೋಡಿ, ಮಾಜಿ ಅಧ್ಯಕ್ಷರು ಕ್ಯಾಂಪ್ಕೋ ಲಿ, ಸುರೇಶ್ ಮುಕ್ಕುಡ ನಿಕಟಪೂರ್ವ ಆಡಳಿತ ಮೊಕ್ತೇಸರರು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಕೋಲ್ಪೆ, ಸತೀಶ್ ಆಳ್ವ ಇರಾಬಾಳಿಕೆ, ವಿಶ್ವನಾಥ ಅಮೈ, ಅಧ್ಯಕ್ಷರು ಸಿದ್ದಿವಿನಾಯಕ ಯುವಕ ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಂತರ ವಿಠಲ ನಾಯಕ್ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರು ಕಿಶೋರ್ ಕುಮಾರ್ ಪುತ್ತೂರು ಆಗಮಿಸಿ ವಿಠ್ಠಲ ನಾಯಕ್ ಮತ್ತು ಬಳಗದವರನ್ನು ಗೌರವಿಸಿದರು. ವಿಧಾನ ಪರಿಷತ್ ಸದಸ್ಯರು ಕಿಶೋರ್ ಕುಮಾರ್ ಪುತ್ತೂರು ಇವರನ್ನು ಕ್ಷೇತ್ರದ ಸಮಿತಿ ವತಿಯಿಂದ ಗೌರವಿಸಲಾಯಿತು.

- Advertisement -

Related news

error: Content is protected !!