ವಿಟ್ಲ : ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ, ಯುವ ಮೋರ್ಚಾ ಪುಣಚ ಮಹಾಶಕ್ತಿ ಕೇಂದ್ರ, ಹಾಗೂ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ, ಪುತ್ತೂರು ಮತ್ತು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಪುತ್ತೂರು ಇವರ ಸಹಭಾಗಿತ್ವದಲ್ಲಿ ನರೇಂದ್ರ ಮೋದಿಯವರ ಜನುಮ ದಿನದ ಅಂಗವಾಗಿ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಹಾಗೂ ಸ್ವಚ್ಛತಾ ಕಾರ್ಯಕ್ರಮವು ದಿನಾಂಕ : 02-10-2022ನೇ ಆದಿತ್ಯವಾರ ಸಮಯ : ಬೆಳಿಗ್ಗೆ ಗಂಟೆ 9ಕ್ಕೆ ಶ್ರೀ ದುರ್ಗಾ ಮಂದಿರ, ಧರ್ಮನಗರ – ಕಂಬಳಬೆಟ್ಟು ಇಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ ವಹಿಸಲಿದ್ದು, ಉದ್ಘಾಟನೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ನೇರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಯುವಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ನವೀನ್ ಪಡ್ನೂರು, ಪುಣಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರಿಪ್ರಸಾದ್ ಯಾದವ್, ಯುವಮೋರ್ಚಾ ದ.ಕ ಜಿಲ್ಲಾ ಉಪಾಧ್ಯಕ್ಷ ಸಹಜ್ ರೈ ಬಳಜ್ಜ, ವಿಟ್ಲಮುಡ್ನೂರು ಶಕ್ತಿಕೇಂದ್ರದ ಪ್ರಮುಖ ಗೋವಿಂದರಾಜ್ ಪೆರುವಾಜೆ ಆಗಮಿಸಲಿದ್ದಾರೆ.