Friday, May 17, 2024
spot_imgspot_img
spot_imgspot_img

ವಿಟ್ಲ: ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನ ಧರ್ಮನಗರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನ ಧರ್ಮನಗರ ಕಂಬಳಬೆಟ್ಟು ಇಲ್ಲಿ ದೇವಿಯ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ದಿನಾಂಕ 26/12/2020 ರ ಶನಿವಾರದಂದು ಧರ್ಮ ನಗರದ ಶ್ರೀ ಜಯದುರ್ಗಾಮಂದಿರದಲ್ಲಿ ನಡೆಯಲಿದೆ.

ಕಾರ್ಯಕ್ರಮಗಳ ವಿವರ: ಶನಿವಾರ ಬೆಳಿಗ್ಗೆ ಗಂಟೆ 8ಕ್ಕೆ ಗಣಪತಿ ಹವನ, 9 ಗಂಟೆಗೆ ಕಲಶ ಪ್ರತಿಷ್ಠೆ, ನವಕ ಕಲಶಾಭಿಷೇಕ ನೆರವೇರಲಿದೆ. ಹಾಗೂ ಮಧ್ಯಾಹ್ನ 12.30ಕ್ಕೆ ಮಹಾಮಂಗಳಾರತಿಯ ನಂತರ ಪ್ರಸಾದ ವಿತರಣೆ ನಡೆದು ಮಹಾ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5 ಗಂಟೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು 7 ಗಂಟೆಗೆ ಸಾಮೂಹಿಕ ದುರ್ಗಾ ಪೂಜೆ ನಡೆಯಲಿದೆ. ರಾತ್ರಿ 8 ಗಂಟೆಗೆ ರಂಗಪೂಜೆ, ಮಹಾಪೂಜೆ ನಡೆದು ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ನಡೆಯಲಿದೆ.

ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿಶ್ವಭಾರತಿ ಯಕ್ಷ ಟ್ರಸ್ಟ್ (ರಿ ) ಮುಡಿಪು ಇವರಿಂದ ಯಕ್ಷಗಾನ ತಾಳಮದ್ದಳೆ “ಶಿವಭಕ್ತ ವೀರಮಣಿ” ಎಂಬ ಯಕ್ಷ ಪ್ರಸಂಗ ನೆರವೇರಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಭಗವದ್ಭಕ್ತರು ಸಕುಟುಂಬ ಸಮೇತರಾಗಿ ಬಂದು ಶ್ರೀ ದೇವರ ಪ್ರಸಾದ ಸ್ವೀಕರಿಸಿ, ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನ ಭಜನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

- Advertisement -

Related news

error: Content is protected !!