Saturday, April 27, 2024
spot_imgspot_img
spot_imgspot_img

ಧರ್ಮಸ್ಥಳದ ಧರ್ಮೋತ್ಥಾನ ಟ್ರಸ್ಟ್ ರಾಜ್ಯೋತ್ಸವ ಪ್ರಶಸ್ತಿ- ಕಾವಂದರಿಗೆ ಅಭಿನಂದನೆ ಸಲ್ಲಿಸಿದ ಬೆಳ್ತಂಗಡಿ ಶಾಸಕ ಹರೀಶ್‍ಪೂಂಜಾ

- Advertisement -G L Acharya panikkar
- Advertisement -

ಬೆಳ್ತಂಗಡಿ(ಅ.29): ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ. ಪ್ರತಿವರ್ಷದಂತೆ ಈ ಬಾರಿಯೂ ಸಹ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದ್ದು, ರಾಜ್ಯ ಸರ್ಕಾರವು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಸಾಧಕಾರಿಗೆ 2020 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ಉದ್ದೇಶಿಸಿದೆ.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಂಘ – ಸಂಸ್ಥೆಗಳ ಪಟ್ಟಿಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ನೇತೃತ್ವದ ಧರ್ಮೋತ್ಥಾನ ಟ್ರಸ್ಟ್ ಕೂಡ ಈ ಬಾರಿ ಆಯ್ಕೆಯಾಗಿದೆ.ಈ ಸಲುವಾಗಿ ಬೆಳ್ತಂಗಡಿ ಶಾಸಕರಾದಂತಹ ಹರೀಶ್ ಪೂಂಜಾರವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು.

ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ನೇತೃತ್ವದ ಧರ್ಮೋತ್ಥಾನ ಟ್ರಸ್ಟ್ ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರವಾಗಿದೆ. ಧರ್ಮೋತ್ಥಾನ ಟ್ರಸ್ಟ್ 200 ವರ್ಷಕ್ಕಿಂತಲೂ ಹಳೆಯದಾದ 250ಕ್ಕೂ ಹೆಚ್ಚು ಶಿಥಿಲವಾದ ದೇವಸ್ಥಾನಗಳನ್ನ ಜೀರ್ಣೋದ್ದಾರ ಮಾಡಿದೆ. ಕಾವಂದರು ರೂಪಿಸಿದ ಈ ಟ್ರಸ್ಟ್ ಶತಮಾನಗಳ ಕಾಲ ಶಾಶ್ವತವಾಗಿ ಉಳಿಯುವಂತಾ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಪುನರುಜ್ಜೀವನ ಮಾಡುತ್ತಿರುವುದು ಅತ್ಯಂತ ಸಂತಸ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಕಾವಂದರನ್ನು ಭೇಟಿಯಾಗಿ ಅಭಿನಂದನೆಗಳನ್ನು ಸಲ್ಲಿಸಿದರು.

- Advertisement -

Related news

error: Content is protected !!