Saturday, April 27, 2024
spot_imgspot_img
spot_imgspot_img

ಉಪ ಸಭಾಪತಿ ಎಸ್. ಎಲ್ . ಧರ್ಮೇಗೌಡ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

- Advertisement -G L Acharya panikkar
- Advertisement -


ಬೆಂಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಎಸ್. ಎಲ್ . ಧರ್ಮೇಗೌಡ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಎಸ್. ಎಲ್ . ಧರ್ಮೇಗೌಡ ಅವರ ಅಕಾಲಿಕ ನಿಧನ ಅತ್ಯಂತ ದುರದೃಷ್ಟಕರ ಹಾಗೂ ತೀವ್ರ ಆಘಾತ ತಂದಿದೆ. ವಿಧಾನ ಪರಿಷತ್ ಸದಸ್ಯರಾಗಿ, ಉಪ ಸಭಾಪತಿಯಾಗಿ ಅವರ ಕಾರ್ಯ ವೈಖರಿ ಅತ್ಯುತ್ತಮವಾಗಿತ್ತು ಎಂದು ಮುಖ್ಯಮಂತ್ರಿಗಳು ಸ್ಮರಿಸಿಕೊಂಡಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಈ ಆಘಾತವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!