Saturday, June 28, 2025
spot_imgspot_img
spot_imgspot_img

ಮಂಗಳೂರು: ಶಬರಿಮಲೆ ಯಾತ್ರಾರ್ಥಿ ಕೇರಳದಲ್ಲಿ ಹೃದಯಾಘಾತದಿಂದ ಸಾವು..!

- Advertisement -
- Advertisement -

ಮಂಗಳೂರು: ಶಬರಿಮಲೆ ಯಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ.

ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ ಕಾಟಿಪಳ್ಳ ಗಣೇಶಪುರ ನಿವಾಸಿ ಸಂದೀಪ್ ಕಾಟಿಪಳ್ಳ (35) ಎಂದು ಗುರುತಿಸಲಾಗಿದೆ.

ಸಂದೀಪ್ ತನ್ನ ಒಬ್ಬ ಮಗನ ಹೆಸರಿನಲ್ಲಿ ಮಾಡಿದ ಪ್ರತಿಜ್ಞೆಯನ್ನು ಪೂರ್ಣಗೊಳಿಸಲು ಶಬರಿಮಲೆಗೆ ತೆರಳಿದ್ದರು. ಶನಿವಾರದಂದು ಗರ್ಭಗುಡಿಯಲ್ಲಿರುವ ಅಯ್ಯಪ್ಪನ ದರ್ಶನ ಪಡೆಯಲು ಹದಿನೆಂಟು ಮೆಟ್ಟಿಲು ಹತ್ತುತ್ತಿದ್ದ ವೇಳೆ ಮೆಟ್ಟಿಲುಗಳ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಸಂದೀಪ್ ಅವರು ನಿತ್ಯಾನಂದ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿಯಾಗಿದ್ದು, ಸೇವಾ ಟ್ರಸ್ಟ್ ಹಾಗೂ ಕೇಸರಿ ಗೆಳೆಯರ ಬಳಗದ ಸದಸ್ಯರಾಗಿ ಸಮಾಜಮುಖಿ ಕಾರ್ಯದಲ್ಲಿ ಸಕ್ರಿಯರಾಗಿದ್ದರು. ಎಂಆರ್‌ಪಿಎಲ್‌ನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!