Wednesday, May 8, 2024
spot_imgspot_img
spot_imgspot_img

ಬೆಳ್ತಂಗಡಿ: ಪೈಪ್ ಲೈನ್ ನಲ್ಲಿ ಡಿಸೇಲ್ ಕಳವು ಪ್ರಕರಣ : ಐದು ಆರೋಪಿಗಳ ಬಂಧನ

- Advertisement -G L Acharya panikkar
- Advertisement -

ಬೆಳ್ತಂಗಡಿ: ಬೆಂಗಳೂರು- ಮಂಗಳೂರು ಪೆಟ್ರೋನೆಟ್‌ ಪೈಪ್‌ಲೈನ್‌ ಮೂಲಕ ಡಿಸೇಲ್ ಸರಬರಾಜು ಆಗುತ್ತಿದ್ದು ಮಾ.16ರ ರಾತ್ರಿಯಿಂದ ಮಾ.19ರ ರಾತ್ರಿಯ ಮಧ್ಯದ ಅವಧಿಯಲ್ಲಿ ಪೈಪ್‌ಲೈನ್‌ ಕೊರೆದು 9 ಲಕ್ಷ ರೂ ಮೌಲ್ಯದ ಡಿಸೇಲ್ ಕಳ್ಳತನ ಮಾಡಿದ ಘಟನೆ ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಜನ ಆರೋಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ದಿನೇಶ್ ಗೌಡ(40), ಪುದುವೆಟ್ಟು ಗ್ರಾಮದ ಮೋಹನ್ (28), ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ನೆಲ್ಯಾಡಿ ನಿವಾಸಿ ಜಯ ಸುವರ್ಣ(39), ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹರೆಹಳ್ಳಿಯ ನಿವಾಸಿ ದಿನೇಶ್ (40), ಕಡಬ ತಾಲೂಕಿನ ಕಡಬ ಗ್ರಾಮದ ಕಾರ್ತಿಕ್(28) ಬಂಧಿತ ಆರೋಪಿಗಳು. ಕೃತ್ಯಕ್ಕೆ ಬಳಸಿದ 800 ಕಾರು, 100 ಲೀಟರ್ ಡೀಸೆಲ್, ಪೈಪುಗಳು, ಡ್ರಿಲಿಂಗ್ ಮೆಷಿನ್, ವೆಡ್ಡಿಂಗ್ ಮೆಷಿನ್, ಮೊಬೈಲ್ ಫೋನ್ ಗಳನ್ನು ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ಎ. 1 ರಂದು ನೆಲ್ಯಾಡಿಯಲ್ಲಿ ವಶಕ್ಕೆ ಪಡೆದು ಬೆಳ್ತಂಗಡಿ ಕೋರ್ಟ್ ಗೆ ಎ.1 ರಂದು ಸಂಜೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗಳಿಗೆ 4 ದಿನಗಳ ಪೊಲೀಸ್ ಕಸ್ಟಡಿ ನೀಡಿದ್ದರು.ಪೊಲೀಸ್ ಕಸ್ಟಡಿ ಅಂತ್ಯವಾಗಿರುವುದರಿಂದ ಎ.4 ರಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿದ್ದು ಅರೋಪಿಗಳಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ವಸಂತ ಅಚಾರ್ ನೇತೃತ್ವದ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್, ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ತಂಡದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

- Advertisement -

Related news

error: Content is protected !!