Friday, April 26, 2024
spot_imgspot_img
spot_imgspot_img

ರಮೇಶ್ ಜಾರಕಿಹೊಳಿ ಸಿ ಡಿ ಹಗರಣ: ವಿಚಾರಣೆಗೆ ಹಾಜರಾಗದ ದಿನೇಶ್ ಕಲ್ಲಹಳ್ಳಿ

- Advertisement -G L Acharya panikkar
- Advertisement -

ಬೆಂಗಳೂರು: ರಮೇಶ್ ಜಾರಕಿಹೊಳಿ ತಲೆದಂಡಕ್ಕೆ ಕಾರಣವಾಗಿರುವ ಸಿ ಡಿ ಹಗರಣಕ್ಕೆ ಸಂಬಂಧಿಸಿದಂತೆ ದೂರು ದಾರ ದಿನೇಶ್ ಕಲ್ಲಹಳ್ಳಿ ಇಂದು ವಿಚಾರಣೆಗೆ ಹಾಜರಾಗಿಲ್ಲ. ನನಗೆ ಜೀವ ಬೆದರಿಕೆ ಇದೆ. ಸೂಕ್ತ ಭದ್ರತೆ ನೀಡಲಾಗಿಲ್ಲ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಅಸಮರ್ಥನಾಗಿದ್ದೇನೆ ಎಂದು ದಿನೇಶ್ ಕಲ್ಲಹಳ್ಳಿ ಹೇಳಿದ್ದಾರೆ.

ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಇನ್ಸ್ ಪೆಕ್ಟರ್ ಗೆ ದಿನೇಶ್ ಕಲ್ಲಹಳ್ಳಿ ಪತ್ರ ಬರೆದಿದ್ದಾರೆ . ಸೂಕ್ತ ಭದ್ರತೆ ನೀಡಿದರೆ ಮಾರ್ಚ್ 9ರಂದು ವಿಚಾರಣಗೆ ಹಾಜರಾಗುವುದಾಗಿ ದಿನೇಶ್ ಕಲ್ಲಹಳ್ಳಿ ತಿಳಿಸಿದ್ದಾರೆ.

ದಿನೇಶ್ ಕಲ್ಲಹಳ್ಳಿ ನೀಡಿದ ದೂರಿನಲ್ಲಿ ಸ್ಪಷ್ಟತೆ ಇಲ್ಲ. ಹೆಚ್ಚಿನ ಮಾಹಿತಿ ಬೇಕಾಗಿದೆ. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ದಿನೇಶ್ ಕಲ್ಲಹಳ್ಳಿಗೆ ಪೊಲೀಸರು ನೋಟಿಸ್ ನೀಡಿದ್ದರು.

- Advertisement -

Related news

error: Content is protected !!