Monday, May 13, 2024
spot_imgspot_img
spot_imgspot_img

ಬೆಳ್ತಂಗಡಿ : ಜಾಗದ ವಿಚಾರದಲ್ಲಿ ತಕರಾರು ; ಮಹಿಳೆಯ ಜೊತೆ ಅಸಭ್ಯ ವರ್ತನೆ, ಜೀವ ಬೆದರಿಕೆ..!

- Advertisement -G L Acharya panikkar
- Advertisement -

ಬೆಳ್ತಂಗಡಿ : ಮಹಿಳೆಯೋರ್ವರಿಗೆ ಜಾಗದ ವಿಚಾರದಲ್ಲಿ ಅನುಚಿತವಾಗಿ ವರ್ತಿಸಿ, ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ಶಿಬಾಜೆ ಗ್ರಾಮದಲ್ಲಿ ನಡೆದಿದೆ.

ಹಲ್ಲೆ ನಡೆಸಿದ ಆರೋಪಿಗಳು O T ಜಾರ್ಜ್, O T ಕುರಿಯಾಕೋಸ್, ಪ್ರಮೋದ್ TM ಹಾಗೂ ಮ್ಯಾಥ್ಯೂTK ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ಶಿಬಾಜೆ ಗ್ರಾಮದಲ್ಲಿ ಮಹಿಳೆಯ ಗಂಡನ ಸ್ವಾಧೀನದಲ್ಲಿರುವ ಸರಕಾರಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆಯವರಿಗೆ ಯಾವುದೇ ಮಾಹಿತಿ ನೀಡದೇ ಖಾಸಗಿ ಸರ್ವೇಯವರ ಮೂಲಕ ಅಳತೆ ಮಾಡಲು ಬಂದಾಗ ಮಹಿಳೆಯೋರ್ವರಿಗೆ ಹಾಗೂ ತಡೆಯಲು ಹೋಗಿದ್ದ ಇನ್ನೋರ್ವ ಮಹಿಳೆಗೆ ಅನುಚಿತವಾಗಿ ವರ್ತಿಸಿರುವುದಲ್ಲದೇ , ಕೈಯಿಂದ ಹಲ್ಲೆ ನಡೆಸಿದ್ದಾರೆ. ಇದನ್ನು ತಡೆಯಲು ಹೋದ ಮಹಿಳೆಯ ಗಂಡನಿಗೂ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!