Monday, April 29, 2024
spot_imgspot_img
spot_imgspot_img

ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿ, ಅಶ್ಲೀಲ ಬರಹ ವೈರಲ್‌; ಮನನೊಂದು ಯುವತಿ ಆತ್ಮಹತ್ಯೆ

- Advertisement -G L Acharya panikkar
- Advertisement -

ಕೊಟ್ಟಾಯಂ: ಸೈಬರ್​ ದಾಳಿಯಿಂದ ಮನನೊಂದು ಯುವತಿಯೊಬ್ಬಳು ಸಾವಿನ ಹಾದಿ ಹಿಡಿದಿರುವ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಅಡಿಯಲ್ಲಿ ಮೃತ ಯುವತಿಯ ಮಾಜಿ ಬಾಯ್​ಫ್ರೆಂಡ್​ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮೃತ ಯುವತಿಯನ್ನು ಅಥಿರಾ ಎಂದು ಗುರುತಿಸಲಾಗಿದೆ. ಆಕೆಯ ಮಾಜಿ ಬಾಯ್​ಫ್ರೆಂಡ್​ ಅರುಣ್​ ವಿದ್ಯಾಧರಣ್​ ವಿರುದ್ಧ ಪ್ರಕರಣ ದಾಖಲಾಗಿದೆ. ಮೃತ ಅಥಿರಾ ಕೊತ್ತನಲ್ಲೂರಿನ ನಿವಾಸಿ. ಸೋಮವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾದರು.

ಅಥಿರಾ ಕೊಟ್ಟಾಯಂನ ಖಾಸಗಿ ಸಂಸ್ಥೆಯಲ್ಲಿ ವೆಬ್​ ಡಿಸೈನರ್​ ಆಗಿ ಕೆಲಸ ಮಾಡುತ್ತಿದ್ದರು. ಅಥಿರಾ ಅವರ ಸ್ನೇಹಿತನಾಗಿದ್ದ ಅರುಣ್ ವಿದ್ಯಾಧರನ್ ಫೇಸ್​ಬುಕ್ ಮೂಲಕ ಆಕೆಯ ವಿರುದ್ಧ ಸೈಬರ್ ದಾಳಿ ನಡೆಸಿದ್ದ. ಇತ್ತೀಚೆಗಷ್ಟೇ ಆಥಿರಾ, ಅರುಣ್​ ಜತೆಗಿನ ಸ್ನೇಹವನ್ನು ತ್ಯಜಿಸಿದ್ದರು. ಅಥಿರಾಗೆ ಮದುವೆ ಪ್ರಸ್ತಾಪಗಳು ಬರುತ್ತಿವೆ ಎಂಬುದನ್ನು ತಿಳಿದುಕೊಂಡ ಅರುಣ್, ಸಾಮಾಜಿಕ ಜಾಲತಾಣ ಮೂಲಕ ಅಥಿರಾಳನ್ನು ನಿರಂತರವಾಗಿ ನಿಂದಿಸಿದ್ದಾನೆ. ಅಲ್ಲದೆ, ಫೇಸ್​ಬುಕ್​ನಲ್ಲಿ ಆಕೆಯ ಚಿತ್ರಗಳನ್ನೂ ಪೋಸ್ಟ್​ ಮಾಡಿ ಮಾನಹಾನಿಕರವಾದ ಅಶ್ಲೀಲ ಬರಹಗಳನ್ನು ಬರೆದಿದ್ದ.

ಇದು ಅಥಿರಾಳ ಗಮನಕ್ಕೆ ಬಂದು ತಕ್ಷಣ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಅರುಣ್ ವಿದ್ಯಾಧರನ್ ಸದ್ಯ ಪರಾರಿಯಾಗಿದ್ದಾನೆ. ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

- Advertisement -

Related news

error: Content is protected !!