Saturday, June 28, 2025
spot_imgspot_img
spot_imgspot_img

ಮಂಗಳೂರು: ತಾಯಿಯನ್ನು ಉಳಿಸಲು ಆಟೋವನ್ನೇ ಎತ್ತಿದ ಬಾಲಕಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸನ್ಮಾನ

- Advertisement -
- Advertisement -

ಮಂಗಳೂರು: ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತಾಯಿಗೆ ಆಟೋ ರಿಕ್ಷಾ ಡಿಕ್ಕಿ ಆಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ಆಟೋವನ್ನೇ ಎತ್ತಿ ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು.

7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿದ ಜಿಲ್ಲಾಧಿಕಾರಿಗಳು ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಉಪನಿರ್ದೇಶಕ ಹೇಮಲತಾ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಮತ್ತು ವೈಭವಿ ಪಾಲಕರು ಉಪಸ್ಥಿತರಿದ್ದರು

- Advertisement -

Related news

error: Content is protected !!