Sunday, June 29, 2025
spot_imgspot_img
spot_imgspot_img

‘ಅತ್ಯುತ್ತಮ ನಟ​’​​ ರಾಷ್ಟ್ರಪ್ರಶಸ್ತಿ ಸ್ವೀಕರಿಸಿದ ಡಿವೈನ್​ ಸ್ಟಾರ್​ ರಿಷಬ್​ ಶೆಟ್ಟಿ

- Advertisement -
- Advertisement -

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ನಿನ್ನೆ ದೆಹಲಿಯಲ್ಲಿ ನಡೆದಿದ್ದು, ಕನ್ನಡದ ಪ್ರತಿಭೆಗಳಾದ ರಿಷಬ್ ಶೆಟ್ಟಿ, ನಿತ್ಯಾ ಮೆನನ್ ಅವರು ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ. ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’ ಮತ್ತು ಈ ಚಿತ್ರದ ನಟನೆಗೆ ರಿಷಬ್ ಶೆಟ್ಟಿ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ.

“ಪ್ರತೀ ಚಿತ್ರಗಳೂ ಪ್ರಭಾವ ಬೀರುತ್ತವೆ. ಸಮಾಜದಲ್ಲಿ ಬದಲಾವಣೆ ಅಥವಾ ಪ್ರಭಾವ ಬೀರುವ ಸಿನಿಮಾಗಳನ್ನು ಮಾಡುವುದೇ ನಮ್ಮ ಉದ್ದೇಶ. ನಾನು ಪ್ರೇಕ್ಷಕರಿಗೆ ಧನ್ಯವಾದ ಅರ್ಪಿಸುತ್ತೇನೆ. ರಾಷ್ಟ್ರೀಯ ಪ್ರಶಸ್ತಿಗಳು ಕಲಾವಿದನಿಗೆ ಅತ್ಯಂತ ಪ್ರತಿಷ್ಠಿತ ಬಹುಮಾನ” ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ. ನ್ಯಾಷನಲ್ ಅವಾರ್ಡ್ ಸ್ವೀಕರಿಸಿದಕ್ಕೆ ನಟ ರಿಷಬ್ ಶೆಟ್ಟಿ ಅವರು ಅತ್ಯಂತ ಖುಷಿ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!