- Advertisement -
- Advertisement -
ಬೆಂಗಳೂರು: ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ಜಾಡು ಹಿಡಿದಿರುವ ಪೊಲೀಸರು ತಡರಾತ್ರಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಅವಿತಿದ್ದ ಸುಮಾರು 60 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಿಸಿಬಿ ಡಿಸಿಪಿ ರವಿಕುಮಾರ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು, ಸಿಐಎಸ್ ಎಫ್ ಹಾಗೂ ಆರ್ ಎಎಫ್ ತಂಡಗಳು ರಾತ್ರಿ 12 ಗಂಟೆಯಿಂದ ಮುಂಜಾನೆ 4 ಗಂಟೆ ತನಕ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಕೆ.ಜಿ.ಹಳ್ಳಿ ಕಾರ್ಪೋರೇಟರ್ ಪತಿ ಸೇರಿದಂತೆ ಸುಮಾರು 60 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಡಿ.ಜೆ.ಹಳ್ಳಿ ಪೊಲೀಸ್ ಠಾಣೆ ಎದುರು ನಡೆದ ಗಲಭೆ ವೇಳೆ ಕಲೀಂ ಪಾಷ ಇದ್ದ ಎನ್ನಲಾಗಿತ್ತು. ಗಲಾಟೆ ಜೋರಾದಾಗ ಆತ ಸ್ಥಳದಿಂದ ಪರಾರಿಯಾಗಿದ್ದ ಎಂಬ ಆರೋಪ ಕೇಳಿಬಂತ್ತು. ಈ ಹಿನ್ನಲೆಯಲ್ಲಿ ಗಲ್ಲಿಗಲ್ಲಿಯೂ ಬಿಡದೇ ರಾತ್ರೋ ರಾತ್ರಿ ಫೀಲ್ಡಿಗಿಳಿದ ಪೊಲೀಸರು ಸುಮಾರು 60 ಆರೋಪಿಗಳನ್ನು ಬಂಧಿಸಿ, ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.
- Advertisement -