Friday, May 23, 2025
spot_imgspot_img
spot_imgspot_img

ಡಿ.ಜೆ.ಹಳ್ಳಿ ಗಲಭೆ ವೇಳೆ ಮನೆಗೆ ನುಗ್ಗಿ ಚಿನ್ನಾಭರಣ ಕಳವು

- Advertisement -
- Advertisement -

ಬೆಂಗಳೂರು: ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಗಲಭೆ ವೇಳೆ ದುಷ್ಕರ್ಮಿಗಳು ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದಾರೆ ಎಂದು ಸ್ಥಳೀಯರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಾಮಸ್ವಾಮಿ ಎಂಬುವವರು ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಗಲಭೆ ವೇಳೆ ಮನೆಗೆ ನುಗ್ಗಿರುವ ಕಿಡಿಗೇಡಿಗಳು ಹಲವಾರು ಎಲೆಕ್ಟ್ರಿಕ್ ವಸ್ತುಗಳನ್ನು ಒಡೆದುಹಾಕಿದ್ದಾರೆ. ಇದಲ್ಲದೇ, ಸುಮಾರು 200 ಗ್ರಾಂ ಚಿನ್ನ, 500 ಗ್ರಾಂ ಬೆಳ್ಳಿ, 75 ಸಾವಿರ ಹಣ ಹಾಗೂ 5 ರೇಷ್ಮೆ ಸೀರೆ ಹಾಗೂ ಸಿಲಿಂಡರ್ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

- Advertisement -

Related news

error: Content is protected !!