- Advertisement -
- Advertisement -
ಗಲಭೆ ನಡೆದ ಡಿ.ಜೆ.ಹಳ್ಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿಯಲ್ಲಿ ಗಲಭೆ ನಡೆದಾಗ ಸಂದರ್ಭದಲ್ಲಿ ಕೊರೊನಾ ತಗುಲಿ ಸಿದ್ದರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಲು ಸಾಧ್ಯವಾಗಿಲ್ಲ. ಸದ್ಯ ಸಿದ್ದರಾಮಯ್ಯ ಆರೋಗ್ಯವಾಗಿದ್ದು, ಡಿ.ಜೆ ಹಳ್ಳಿಗೆ ಭೇಟಿ ನೀಡಿದರು.
ಮೊದಲಿಗೆ ಸುಟ್ಟು ಹೋದ ಅಖಂಡ ಶ್ರೀನಿವಾಸ ಮನೆಗ ಭೇಟಿ ನೀಡಿದರು. ಬಳಿಕ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗೆ ತೆರಳಿದರು. ನಂತರ ಅಲ್ಲಿ ಸುಟ್ಟು ಹೋಗಿರುವ ವಾಹನಗಳ ಪರಿಶೀಲನೆ ನಡೆಸಿದರು. ನಂತರ ಪ್ರಕರಣದ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದರು.
- Advertisement -