Monday, June 30, 2025
spot_imgspot_img
spot_imgspot_img

ದ.ಕ. ಜಿಲ್ಲೆಯಲ್ಲಿ ಅಹಿತಕರ ಘಟನೆ: ಮಧ್ಯಂತರ ವರದಿ ಸಲ್ಲಿಸಿದ ಕೆಪಿಸಿಸಿ ಸತ್ಯಶೋಧನಾ ಸಮಿತಿ

- Advertisement -
- Advertisement -

ಬೆಂಗಳೂರು : ದ.ಕ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ಅರಿಯಲು ಕೆಪಿಸಿಸಿ ನೇಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ನಾಸಿ‌ರ್ ಹುಸೇನ್ ನೇತೃತ್ವದ ಸತ್ಯಶೋಧನಾ ಸಮಿತಿಯು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಗುರುವಾರ ಮಧ್ಯಂತರ ವರದಿ ಸಲ್ಲಿಸಿದೆ.

ವರದಿ ಸ್ವೀಕರಿಸಿ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾ‌ರ್, ಕರಾವಳಿ ಪ್ರದೇಶದಲ್ಲಿ ಇತ್ತೀಚೆಗೆ ಕೋಮು ದ್ವೇಷದ ಪರಿಣಾಮ ಸರಣಿ ಹತ್ಯೆಗಳು ನಡೆದಿದ್ದು, ಇದು ಎಲ್ಲರಲ್ಲೂ ಆತಂಕವನ್ನು ಉಂಟುಮಾಡಿತ್ತು. ಇಂತಹ ಘಟನೆಗಳನ್ನು ತಡೆಯಲು ರಾಜ್ಯ ಸರಕಾರ ಈಗಾಗಲೇ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ. ಸ್ಥಳೀಯರ ಭಾವನೆ, ಪರಿಸ್ಥಿತಿ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಅಲ್ಲಿಗೆ ಪಕ್ಷದಿಂದ ಸತ್ಯಶೋಧನಾ ಸಮಿತಿ ಕಳುಹಿಸಲಾಗಿತ್ತು. ಸದ್ಯ ಮಧ್ಯಂತರ ವರದಿ ನಮಗೆ ತಲುಪಿದ್ದು, ಈ ವರದಿಯನ್ನು ಓದಿ ಮುಂದಿನ ತೀರ್ಮಾನ ತಿಳಿಸಲಾಗುವುದು ಎಂದರು.

- Advertisement -

Related news

error: Content is protected !!