Saturday, June 28, 2025
spot_imgspot_img
spot_imgspot_img

ದ.ಕ. ಜಿಲ್ಲೆಯಲ್ಲಿ ಶೀಘ್ರವೇ ಹೊಸ 6 ಇಂದಿರಾ ಕ್ಯಾಂಟೀನ್‌ಗಳು ಆರಂಭ: ದಿನೇಶ್ ಗುಂಡೂರಾವ್

- Advertisement -
- Advertisement -

ದ.ಕ. ಜಿಲ್ಲೆಯಲ್ಲಿ ಹೊಸತಾಗಿ 10 ಇಂದಿರಾ ಕ್ಯಾಂಟೀನ್‌ಗಳನ್ನು ವಿವಿಧ ಕಡೆಗಳಲ್ಲಿ ಈ ಅವಧಿಯಲ್ಲಿ ಆರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ನಾಲ್ಕು ಸಿದ್ಧಗೊಂಡಿದ್ದು, ಮೂರು ಉದ್ಘಾಟನೆಯಾಗಿದೆ. ಇನ್ನುಳಿದ ಆರು ಕ್ಯಾಂಟೀನ್‌ಗಳನ್ನು ಶೀಘ್ರವೇ ಆರಂಭಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಕಿನ್ನಿಗೋಳಿಯಲ್ಲಿ ನೂತನ ಇಂದಿರಾ ಕ್ಯಾಂಟೀನನ್ನು ಬುಧವಾರ ಉದ್ಘಾಟಿಸಿದ ಬಳಿಕ ಕಿನ್ನಿಗೋಳಿ ಇಮ್ಯಾಕ್ಯುಲೇಟ್ ಕನ್ಸೆಪ್ಪನ್‌ ಚರ್ಚ್ ಸಭಾಂಗಣದಲ್ಲಿ ನಡೆದ ಅಹವಾಲು ಸ್ವೀಕಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಬಜ್ಜೆಯಲ್ಲಿಯೂ ನೂತನ ಇಂದಿರಾ ಕ್ಯಾಂಟೀನ್ ಇಂದು ಉದ್ಘಾಟನೆಯಾಗಬೇಕಿತ್ತು. ಕಾಮಗಾರಿ ಬಾಕಿ ಇರುವುದರಿಂದ ಶೀಘ್ರದಲ್ಲೇ ಉದ್ಘಾಟನೆ ನಡೆಯಲಿದೆ. ಜತೆಗೆ ಉಳಿದ ಆರು ಕ್ಯಾಂಟೀನ್‌ಗಳೂ ತೆರೆಯುವ ಮೂಲಕ 25 ರೂ.ಗಳಲ್ಲಿ ಬೆಳಗ್ಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿಯ ಊಟ ಲಭ್ಯವಾಗುತ್ತಿದೆ ಎಂದರು.ಜಿಲ್ಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವ ಜವಾಬ್ದಾರಿಯ ಜತೆಗೆ ಸಾರ್ವಜನಿ ಕರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುವುದು ಸರಕಾರದ ಜವಾಬ್ದಾರಿ. ಖಾತಾ, ಪ್ಲಾಟಿಂಗ್‌ನಲ್ಲಾಗುವ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ವ್ಯವಸ್ಥೆ ಸರಿಪಡಿಸುವ ಕಾರ್ಯ ನಡೆಸಲಾಗುತ್ತಿದೆ.ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿಕೊಂಡು ಸೂಕ್ತ ಕ್ರಮಕೈಗೊಳ್ಳಲಾ ಗುವುದು ಎಂದು ಸಚಿವರು ಹೇಳಿದರು.

- Advertisement -

Related news

error: Content is protected !!