- Advertisement -
- Advertisement -




ಅಳಕೆಮಜಲು ಕೆಮನಾಜೆ ಎಂಬಲ್ಲಿ ಇಂದು ಹಾಡುಹಗಲೇ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಅಳಕೆಮಜಲು ಕೆಮನಾಜೆ ನಿವಾಸಿ ಪುಷ್ಪರಾಜ್ ಎಂಬವರ ಮನೆಯಿಂದ ಸುಮಾರು 15 ಪವನ್ ಚಿನ್ನ ಮತ್ತು ಕೆಮನಾಜೆ ನಿವಾಸಿ ಕೃಷ್ಣಪ್ಪ ಕುಲಾಲ್ (ಕುಂಞ್ಞಣ್ಣ) ರವರ ಮನೆಯಿಂದ ಸುಮಾರು 12 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.
ಇದೀಗ ಘಟನಾಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿದ್ದಾರೆ. ವಿಟ್ಲ ಠಾಣಾ ಇನ್ಸ್ಪೆಕ್ಟರ್ ನಾಗರಾಜ್ ಹೆಚ್.ಇ. ಸಬ್ ಇನ್ಸ್ಪೆಕ್ಟರ್ ಕೌಶಿಕ್ ಮತ್ತು ಪೊಲೀಸ್ ಸಿಬ್ಬಂದಿಗಳು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.





- Advertisement -