- Advertisement -
- Advertisement -
ವಿಟ್ಲ: ಜೆಸಿಐ ಸಪ್ತಾಹ 2023ರ ಎರಡನೇ ದಿನದ ಕಾರ್ಯಕ್ರಮದ ಪ್ರಯುಕ್ತ ಶುದ್ಧ ಕುಡಿಯುವ ನೀರಿನ ಘಟಕವನ್ನು ಪೂರ್ವಾಧ್ಯಕ್ಷ ಜೇಸಿ ಚಂದ್ರಹಾಸ ಶೆಟ್ಟಿಯವರು ಉದ್ಘಾಟಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಘಟಕದ ಪೂರ್ವಾಧ್ಯಕ್ಷ ಜೇಸಿ ಹಾಜಿ ಹಸನ್ ವಿಟ್ಲ ನೀರಿನ ಮಹತ್ವದ ಬಗ್ಗೆ ತಿಳಿಸಿದರು. ಘಟಕಾಧ್ಯಕ್ಷ ಜೆಸಿ ಪರಮೇಶ್ವರ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷ ಸರೋಜಿನಿ ನಾಗೇಶ್, ಅಂಗನವಾಡಿ ಶಿಕ್ಷಕಿ ಮೂಕಾಂಬಿಕಾ, ಘಟಕದ ಕಾರ್ಯದರ್ಶಿ ಜೇಸಿ ದೀಕ್ಷಿತ್ , ಸಪ್ತಾಹದ ನಿರ್ದೇಶಕ ಜೆಸಿ ರಿತೆಷ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಘಟಕದ ಪೂರ್ವಾಧ್ಯಕ್ಷರು,ಸದಸ್ಯರು ಹಾಗೂ ಅಂಗನವಾಡಿ ಕೇಂದ್ರದ ಮಕ್ಕಳು ಮತ್ತು ಪೋಷಕರು ಹಾಜರಿದ್ದರು.
- Advertisement -