Sunday, May 5, 2024
spot_imgspot_img
spot_imgspot_img

ಬೆಂಗಳೂರಿನಲ್ಲಿ  ಹಾಡುಹಗಲೇ ಡಬಲ್ ಮರ್ಡರ್

- Advertisement -G L Acharya panikkar
- Advertisement -

ಪಂಪಾ ಬಡವಾಣೆಯಲ್ಲಿರುವ ಏರೋನಿಕ್ಸ್ ಕಂಪನಿಗೆ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಆಗಮಿಸಿದ ದುಷ್ಕರ್ಮಿಗಳು ಪಣೀಂದ್ರ ಹಾಗೂ ವಿನುಕುಮಾರ್ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿ ಚಾಕುವಿನಿಂದ ಚುಚ್ಚಿ ಪರಾರಿಯಾಗಿದ್ದಾರೆ. ಮೊದಲ ಮಹಡಿಯಲ್ಲಿ ಒಬ್ಬರನ್ನ ಎರಡನೇ ಮಹಡಿಯಲ್ಲಿ ಒಬ್ಬರ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಮೃತಹಳ್ಳಿ ಠಾಣಾ ಪೊಲೀಸರು ಫಣಿಂದ್ರ ಮತ್ತು ವಿನುಕುಮಾರ್ ಮೃತದೇಹಗಳನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಏರೋನಿಕ್ಸ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಫೆಲಿಕ್ಸಯು, ಕಂಪನಿಯಿಂದ ಹೊರಬಂದು ಸ್ವಂತ ಕಂಪನಿ ಸ್ಥಾಪಿಸಿದ್ದ. ಈ ಉದ್ಯಮಕ್ಕೆ ಪಣೀಂದ್ರ ಎದುರಾಳಿಯಾಗಿದ್ದ ಎಂಬ ಕಾರಣಕ್ಕೆ ಫೆಲಿಕ್ಸ್‌ ಫಣೀಂದ್ರರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

- Advertisement -

Related news

error: Content is protected !!