Sunday, June 29, 2025
spot_imgspot_img
spot_imgspot_img

ಕೇಂದ್ರ ಸರ್ಕಾರದ ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರಾಗಿ ಡಾ.ಕೆ ಸುಧಾಕರ್‌ ನೇಮಕ

- Advertisement -
- Advertisement -

ಚಿಕ್ಕಬಳಾಪುರ: ಸಂಸದ ಡಾ.ಕೆ ಸುಧಾಕರ್‌ ಅವರಿಗೆ ಕೇಂದ್ರ ಸರ್ಕಾರವು ಪ್ರಮುಖ ಹೊಣೆಗಾರಿಕೆ ವಹಿಸಿದೆ. ಕೇಂದ್ರ ಸರ್ಕಾರದಿಂದ ಹೊಸದಾಗಿ ಸಂಸದೀಯ ಸ್ಥಾಯಿ ಸಮಿತಿಗಳಿಗೆ ನೇಮಕಾತಿ ನಡೆದಿದ್ದು, ಈ ಪೈಕಿ ಡಾ.ಕೆ ಸುಧಾಕರ್‌ ಅವರನ್ನು ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಡಾ.ಕೆ ಸುಧಾಕರ್‌ ಅವರು ಮೊದಲ ಬಾರಿಗೆ ಸಂಸದರಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಅವಧಿಯಲ್ಲೇ ಅವರನ್ನು ಸ್ಥಾಯಿ ಸಮಿತಿಗೆ ನೇಮಿಸಿ ಮಹತ್ವದ ಹೊಣೆ ವಹಿಸಲಾಗಿದೆ. ಈ ಕುರಿತು ಸಂಸದ ಡಾ.ಕೆ ಸುಧಾಕರ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆ ಮತ್ತು ಸಂತಸದ ವಿಷಯ. ಈ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾಧ್ಯಕ್ಷರಾದ ಓಂ ಬಿರ್ಲಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ ಹಿರಿಯ ನಾಯಕರಾದ ಅಮಿತ್‌ ಶಾ ಹಾಗೂ ಬಿ.ಎಲ್‌.ಸಂತೋಷ್‌ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ್ದಾರೆ.

- Advertisement -

Related news

error: Content is protected !!