- Advertisement -
- Advertisement -





ಕುಣಿಗಲ್: ರಸ್ತೆ ಪಕ್ಕದಲ್ಲಿ ಹಾಕಿರುವ ತಡೆ ಗೋಡೆ ಕಲ್ಲಿಗೆ ಕಾರು ಡಿಕ್ಕಿ ಹೊಡೆದು, ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ 33 ಟಿ.ಎಂ ರಸ್ತೆ ಹುಲಿಯೂರುದುರ್ಗ ಹೋಬಳಿ ಕಂಪಲಾಪುರ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕು ಗುಳೇದಗುಡ್ಡ ಗ್ರಾಮದ ಕಸ್ತೂರಿ ( 43) ಹಾಗೂ ಗಾಯಗೊಂಡವರನ್ನುಕಾರು ಚಾಲಕ ಬಸವರಾಜು, ಹಾಗೂ ಶಾಂತಮ್ಮ ಎಂದು ಗುರುತಿಸಲಾಗಿದೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಸವರಾಜು ಮೈಸೂರಿನ ಬಿಇಎಂಎಲ್ ಇಂಡಿಯಾ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಭಾನುವಾರ ರಜೆ ಇದ್ದ ಕಾರಣ ತನ್ನ ಸ್ವಗ್ರಾಮ ಬಾದಾಮಿ ತಾಲೂಕು ಗುಳೇದಗುಡ್ಡ ಗ್ರಾಮಕ್ಕೆ ಬಂದು ಮತ್ತೆ ಕೆಲಸಕ್ಕೆಂದು ಸೋಮವಾರ ಮೈಸೂರಿಗೆ ವಾಪಸ್ ಹೋಗುತ್ತಿದ್ದ ವೇಳೆ ಈ ಅವಘಡ ಸಂಬವಿಸಿದೆ. ಹುಲಿಯೂರುದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡುತನಿಖೆ ಕೈಗೊಂಡಿದ್ದಾರೆ.
- Advertisement -