Saturday, June 28, 2025
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿ; ಮಗು ಸೇರಿ ಮೂವರಿಗೆ ಗಂಭೀರ ಗಾಯ..!

- Advertisement -
- Advertisement -

ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿಯಾಗಿದ್ದು, ಮಗು ಸೇರಿ ಮೂವರು ತೀವ್ರ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೇಷ್ಟ್ರು ಮನೆ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಶಿರಾದ ಗಿಡ್ಡನಹಳ್ಳಿಯಿಂದ ಯಲಹಂಕದಲ್ಲಿ ನಡೆಯುತ್ತಿದ್ದ ನಾಮಕರಣ ಕಾರ್ಯಕ್ರಮಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮಗು ಸೇರಿ ಮೂವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಬಸ್ಸಿನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!