Sunday, June 29, 2025
spot_imgspot_img
spot_imgspot_img

ಬ್ರಿಜೇಶ್ ಚೌಟ ಸೇರಿ ಭಾರತ ಸಂಸದರ ನಿಯೋಗ ಮಾಸ್ಕೋ ಏರ್​ಪೋರ್ಟ್​ನಲ್ಲಿ ಇಳಿಯುವ ವೇಳೆ ಡ್ರೋನ್ ದಾಳಿ

- Advertisement -
- Advertisement -

ಸಂಸದೆ ಕನ್ನಿಮೋಳಿ ನೇತೃತ್ವದ ಭಾರತದ ಸಂಸದರ ನಿಯೋಗ ಏರ್​ಪೋರ್ಟ್​ನಲ್ಲಿ ಇಳಿಯುವಾಗ ಡ್ರೋನ್ ದಾಳಿ ಸಂಭವಿಸಿದೆ. ಆಪರೇಷನ್ ಸಿಂಧೂರ್‌ ಬಗ್ಗೆ ಇಡೀ ಜಗತ್ತಿಗೆ ಮಾಹಿತಿ ನೀಡಲು ಸಂಸದರ ನಿಯೋಗ ಹೊರಟಿತ್ತು. ಅದರಲ್ಲಿ ಒಂದು ಕನ್ನಿಮೋಳಿ ನಿಯೋಗ ರಷ್ಯಾಗೆ ತೆರಳುತ್ತಿತ್ತು.

ಭಾರತೀಯ ಸಂಸದರ ನಿಯೋಗವು ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿಯಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದೆ. ಈ ವಿಮಾನದಲ್ಲಿ ಡಿಎಂಕೆ ಸಂಸದೆ ಕನಿಮೋಳಿ ಇದ್ದರು. ಡ್ರೋನ್ ದಾಳಿಯಿಂದಾಗಿ, ಈ ವಿಮಾನವು ಮಾಸ್ಕೋ ವಿಮಾನ ನಿಲ್ದಾಣದ ಮೇಲೆ ಹಲವಾರು ಗಂಟೆಗಳ ಕಾಲ ಸುತ್ತುತ್ತಲೇ ಇತ್ತು.ಹಲವಾರು ಗಂಟೆಗಳ ವಿಳಂಬ ಮತ್ತು ಭದ್ರತಾ ಪರಿಸ್ಥಿತಿಗಳ ಮೌಲ್ಯಮಾಪನದ ನಂತರ, ವಿಮಾನವು ಅಂತಿಮವಾಗಿ ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಇಳಿಯಿತು.ಆಪರೇಷನ್ ಸಿಂಧೂರ್ ಬಗ್ಗೆ ಭಾರತದ ನಿಲುವನ್ನು ತಿಳಿಸಲು ಭಾರತದಿಂದ ಆರು ನಿಯೋಗಗಳು ವಿವಿಧ ದೇಶಗಳಿಗೆ ಹೋಗಿವೆ. ಭಾರತದಿಂದ ರಷ್ಯಾಕ್ಕೆ ತೆರಳಿರುವ ನಿಯೋಗದಲ್ಲಿ ಡಿಎಂಕೆ ಸಂಸದೆ ಕನ್ನಿಮೋಳಿ, ಸಮಾಜವಾದಿ ಪಕ್ಷದ ಸಂಸದ ರಾಜೀವ್ ರೈ, ಆರ್‌ಜೆಡಿ ಸಂಸದ ಪ್ರೇಮಚಂದ್ ಗುಪ್ತಾ, ಕ್ಯಾಪ್ಟನ್ ಬ್ರಿಜೇಶ್, ಅಶೋಕ್ ಕುಮಾರ್ ಮಿತ್ತಲ್ ಮತ್ತು ರಾಯಭಾರಿ ಮಂಜೀವ್ ಸಿಂಗ್ ಪುರಿ ಸೇರಿದ್ದಾರೆ.ಸಂಸದೆ ಕನ್ನಿಮೋಳಿ ನೇತೃತ್ವದ ಸಂಸದರ ನಿಯೋಗ ಮೇ 22 ರಂದು ರಷ್ಯಾಕ್ಕೆ ತೆರಳಿತ್ತು. ಕನ್ನಿಮೋಳಿ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ತೊಂದರೆ ಅನುಭವಿಸಿದೆ ಎಂಬುದು ಈಗ ಬೆಳಕಿಗೆ ಬಂದಿದೆ. ರಷ್ಯಾದ ಮಾಸ್ಕೋ ವಿಮಾನ ನಿಲ್ದಾಣದ ಮೇಲೆ ಉಕ್ರೇನ್ ಡ್ರೋನ್ ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ.

- Advertisement -

Related news

error: Content is protected !!