- Advertisement -
- Advertisement -
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ಆರೋಪದಲ್ಲಿ ಬಂಧಿಯಾಗಿರುವ ಪ್ರಮುಖ ಆರೋಪಿ ವೀರೇನ್ ಖನ್ನಾಗೆ ಸಹಕರಿಸಿದ ಆರೋಪದಲ್ಲಿ ತನಿಖಾ ಹಂತದ ಮಾಹಿತಿ ಸೋರಿಕೆ ಮಾಡಿದ ಆರೋಪದಡಿಯಲ್ಲಿ ಸಿಸಿಬಿಯ ಎಸಿಪಿ ಸೇರಿದಂತೆ ಇಬ್ಬರನ್ನು ಅಧಿಕಾರಿ-ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಖನ್ನಾಗೆ ಸಹಕರಿಸಿದ ಆರೋಪದ ಮೇಲೆ ಎಸಿಪಿ ಮತ್ತು ಕಾನ್ಸ್ಟೇಬಲ್ ಅಮಾನತಿಗೆ ಗೃಹ ಸಚಿವರ ಬಳಿ ಸಿಸಿಬಿ ಶಿಫಾರಸು ಮಾಡಿದೆ. ಅಧಿಕಾರಿಗಳು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅನಂತರ ಇಲಾಖಾ ಆಂತರಿಕ ತನಿಖೆ ನಡೆಸಿದಾಗ ಎಸಿಪಿ ಕೈವಾಡ ಇರುವುದು ಪತ್ತೆಯಾಗಿತ್ತು.
ಈ ಹಿನ್ನೆಲೆಯಲ್ಲಿ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಎಸಿಪಿ ವಿರುದ್ಧ ಇಲಾಖಾ ಶಿಸ್ತು ಕ್ರಮಕ್ಕೆ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿ ವರದಿ ನೀಡಿದ್ದರು. ಈ ವರದಿಯನ್ನಾಧರಿಸಿ ಬುಧವಾರ ಎಸಿಪಿ ಮತ್ತು ಅವರಿಗೆ ಸಹಾಯ ಮಾಡಿದ ಆರೋಪದಲ್ಲಿ ಹೆಡ್ಕಾನ್ಸ್ಟೆಬಲ್ ಅವರನ್ನು ಆಯುಕ್ತ ಕಮಲ್ ಪಂತ್ ಅಮಾನತು ಮಾಡಿದ್ದಾರೆ.
- Advertisement -