- Advertisement -
- Advertisement -
ಬೆಂಗಳೂರು: ಗಾಂಜಾ ಅಡ್ಡೆ ಮೇಲೆ ದಾಳಿ ನಡೆಸಿರುವ ಕೋರಮಂಗಲ ಪೊಲೀಸರು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಮಾರಪ್ಪ (24), ರಾಜಕಿಶೋರ್ ನಾಯಕ್ (26), ಮಾರಪ್ಪ (24) ಬಂಧಿತ ಆರೋಪಿಗಳು.
ಆರೋಪಿಗಳು ಆಂಧ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾ ತಂದು ಬೇಗೂರು ಬಳಿಯ ಮೈಲಸಂದ್ರ ಬಳಿ ಗಾಂಜಾದಾಸ್ತಾನು ಮಾಡಿದ್ದರು. ಕೋರಮಂಗಲದ ಪೋರಂ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದರು.
ಈ ಬಗ್ಗೆ ದೊರೆತ ಮಾಹಿತಿಯನ್ನ ಆಧರಿಸಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 32 ಲಕ್ಷ ರೂಪಾಯಿ ಮೌಲ್ಯದ 106 ಕೆ.ಜಿ ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ.
- Advertisement -