- Advertisement -
- Advertisement -
ಧರ್ಮಸ್ಥಳ ಸೌಜನ್ಯ ಪ್ರಕರಣ ಕುರಿತಾಗಿ ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಟ್ವೀಟ್ ಮಾಡಿದ್ದಾರೆ. ಟ್ವಿಟ್ಟರ್ನಲ್ಲಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ಹೇಳಿದ್ದಾರೆ.
‘ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ’ ಎಂದು ದುನಿಯಾ ವಿಜಯ್ ಟ್ವೀಟ್ ಮಾಡಿದ್ದಾರೆ.
ಅದರ ಜೊತೆಗೆ ‘ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು- ಬುದ್ಧ’ ಎಂದು ಬರೆದುಕೊಂಡಿದ್ದಾರೆ. ಸದ್ಯ ಬ್ಲಾಕ್ ಕೋಬ್ರಾ ದುನಿಯಾ ವಿಜಯ್ ಟ್ವೀಟ್ ವೈರಲ್ ಆಗುತ್ತಿದೆ. ಅನೇಕರು ಈ ಕುರಿತಾಗಿ ಕಾಮೆಂಟ್ ಮಾಡಿದ್ದಾರೆ.
- Advertisement -