Wednesday, June 26, 2024
spot_imgspot_img
spot_imgspot_img

ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ಮೃತ್ಯು..!

- Advertisement -G L Acharya panikkar
- Advertisement -

ಮೈಸೂರು: ಕೆಲ ತಿಂಗಳ ಹಿಂದಷ್ಟೇ ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆಯಲ್ಲಿ ಮೈಸೂರು ದಸರಾ ಆನೆ ಅರ್ಜುನ ಕಾಳಗದಲ್ಲಿ ನಿಧನವಾಗಿತ್ತು. ಈ ಬೆನ್ನಲ್ಲೇ ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದಂತ ಅಶ್ವತ್ಥಾಮ ಎನ್ನುವಂತ ಆನೆ ಮೃತಪಟ್ಟಿರೋದಾಗಿ ತಿಳಿದು ಬಂದಿದೆ.

ಈ ಕುರಿತಂತೆ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದು ಮೈಸೂರು ದಸರಾದಲ್ಲಿ ಎರಡು ಬಾರಿ ಪಾಲ್ಗೊಂಡು ಅಂಬಾರಿ ಹೊತ್ತ ಆನೆಗೆ ಸಾಥ್ ನೀಡಿದ್ದಂತ ಅಶ್ವತ್ಥಾಮ ಆನೆಯನ್ನು ಹುಣಸೂರು-ಪಿರಿಯಾಪಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಇರಿಸಲಾಗಿತ್ತು ಎಂದಿದ್ದಾರೆ.

ಭೀಮನಕಟ್ಟೆಯ ಆನೆ ಶಿಬಿರದಲ್ಲಿದ್ದಂತ ಮೈಸೂರು ದಸರಾ ಆನೆ ಅಶ್ವತ್ಥಾಮ ಆಹಾರ ಅರಸಿ ಕಾಡಿಗೆ ತೆರಳಿತ್ತು. ಈ ವೇಳೆಯಲ್ಲಿ ಸೋಲಾರ್ ಬೇಲಿಯಿಂದ ವಿದ್ಯುತ್ ಸ್ಪರ್ಶಿಸಿ, ವಿದ್ಯುತ್ ಆಘಾತದಲ್ಲಿ ಅಶ್ವತ್ಥಾಮ ಆನೆ ಮೃತಪಟ್ಟಿರೋದಾಗಿ ತಿಳಿದು ಬಂದಿದೆ. ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿರುವಂತ ಅಶ್ವತ್ಥಾಮ ಆನೆಯು ಎರಡು ಬಾರಿ ದಸರಾ ಮಹೋತ್ಸವಲ್ಲಿ ಪಾಲ್ಗೊಂಡಿದ್ದಂತ ಆನೆಯಾಗಿದೆ. ಅದಕ್ಕೆ 38 ವರ್ಷ ವಯಸ್ಸಾಗಿತ್ತು ಎಂಬುದಾಗಿ ಹೇಳಲಾಗುತ್ತಿದೆ.

- Advertisement -

Related news

error: Content is protected !!