Friday, July 24, 2026
spot_imgspot_img
spot_imgspot_img

ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವೃದ್ಧ ಸಾವು

- Advertisement -
- Advertisement -

ರಾಮನಗರ: ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವೃದ್ಧ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ರೇವಣಸಿದ್ದೇಶ್ವರ ಬೆಟ್ಟದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಬಿಡದಿ ಹೋಬಳಿಯ ಕೆಂಪನಹಳ್ಳಿ ನಿವಾಸಿ ರೇವಣ್ಣ (65) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ಕುಟುಂಬ ಸಮೇತ ರೇವಣಸಿದ್ದೇಶ್ವರ ಬೆಟ್ಟಕ್ಕೆ ಬಂದಿದ್ದ ರೇವಣ್ಣ, ದೇವರ ದರ್ಶನ ಮಾಡಲು ಬೆಟ್ಟ ಹತ್ತುವಾಗ ಕಾಲು ಜಾರಿ ಕಂದಕಕ್ಕೆ ಬಿದ್ದಿದ್ದಾರೆ. ಮೇಲಿಂದ ಬಿದ್ದ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದು, ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರೇವಣ್ಣ ಶವ ಮೇಲಕ್ಕೆತ್ತಿದ್ದಾರೆ. ಕಂದಕದಿಂದ ಶವ ಹೊರ ತೆಗದು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!