- Advertisement -
- Advertisement -
ವಿಟ್ಲ: ಚುನಾವಣಾ ನೀತಿ ಸಂಹಿತೆ ಪ್ರಕಾರ ಕೋವಿ ಡೆಪಾಸಿಟ್ ಮಾಡಿದ್ದ ಹಿನ್ನಲೆ ಅಳಿಕೆ ಗ್ರಾಮದ ಕೃಷಿಕರು ಕಾಡುಹಂದಿ, ಕೋತಿಗಳ ಉಪಟಳದಿಂದ ಕಂಗಾಲಾಗಿದ್ದಾರೆ.
ಮಂಗನ ಕಿರುಕುಳ ತಾಳಲಾರದೇ ಕೃಷಿಕನೋರ್ವ 112 ತುರ್ತು ಪೊಲೀಸರನ್ನೇ ಮಂಗಗಳನ್ನು ಓಡಿಸಲು ತೋಟಕ್ಕೆ ಬರಮಾಡಿಕೊಂಡ ವಿಚಿತ್ರ ಘಟನೆಯೊಂದು ಅಳಿಕೆ ಗ್ರಾಮದ ಬಿಲ್ಲಂಪದವು ಎಂಬಲ್ಲಿ ನಡೆದಿದೆ.
ಅಳಿಕೆ ಗ್ರಾಮದ ಕೃಷಿಕ ಬಿಲ್ಲಂಪದವು ನಿಶಾಂತ್ ಎಂಬವರು ಜಿಲ್ಲಾಧಿಕಾರಿಗೆ ಕರೆ ಮಾಡಿ ಸಮಸ್ಯೆ ವಿವರಿಸಿದರು, 112 ತುರ್ತು ಸಂಖ್ಯೆಗೆ ಕರೆಮಾಡುವಂತೆ ಜಿಲ್ಲಾಧಿಕಾರಿ ಸಲಹೆಯನ್ನು ನೀಡಿದ ಮೇರೆಗೆ ಬಳಿಕ 112 ತುರ್ತು ಸಂಖ್ಯೆಗೆ ಕರೆ ಮಾಡಿದರು. ಕಂಟ್ರೋಲ್ ರೂಂ ಅಧಿಕಾರಿಗಳ ಸೂಚನೆಯಂತೆ ನಿಶಾಂತ್ ರವರ ಮನೆ ಅಂಗಳಕ್ಕೆ 112 ಸಿಬ್ಬಂದಿಗಳು ಬಂದಿದ್ದಾರೆ. ಈ ಬಗ್ಗೆ
ಸಾಮಾಜಿಕ ತಾಣಗಳಲ್ಲಿ ಫೊಟೋ ಸಹಿತ ಆಡಿಯೋ ವೈರಲ್ ಆಗಿದೆ.
- Advertisement -