Saturday, June 28, 2025
spot_imgspot_img
spot_imgspot_img

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ಸಿದ್ದರಾಮಯ್ಯ ಬೆಂಗಾವಲು ಕಾರಿನ ಸಿಬ್ಬಂದಿಗಳ ಮೇಲೆ ಎಫ್ಐಆರ್ ದಾಖಲು

- Advertisement -
- Advertisement -

ಬೆಂಗಳೂರು: ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಚಾಲಕ ಮತ್ತು ಬೆಂಗಾವಲು ವಾಹನದಲ್ಲಿದ್ದ ಸಿಬ್ಬಂದಿಗಳ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕಾರಣ ಎಫ್ಐಆರ್ ದಾಖಲಾಗಿದೆ.

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣ, ಚುನಾವಣಾಧಿಕಾರಿ ನಾಗರಾಜ ಎನ್ ಅವರು ಪೋಲಿಸರಿಗೆ ದೂರು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 353 (ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ), 188 (ಸರ್ಕಾರಿ ಅಧಿಕಾರಿಯ ಆದೇಶ ಪಾಲಿಸದಿರುವುದು) ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿನ್ನೆ ಬಿಬಿಎಂಪಿ ಕಚೇರಿಯಲ್ಲಿ ಕುಸುಮಾ ಅವರ ನಾಮಪತ್ರ ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಆಗಮಿಸಿದ್ದರು. ಚುನಾವಣೆಯ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಕಚೇರಿಯ 100 ಮೀಟರ್ ದೂರದಲ್ಲಿ ಯಾವುದೇ ವಾಹನಗಳು ಬಾರದಂತೆ ಬ್ಯಾರಿಕೇಡ್ ಹಾಕಲಾಗಿತ್ತು.

- Advertisement -

Related news

error: Content is protected !!