Saturday, June 28, 2025
spot_imgspot_img
spot_imgspot_img

ಕಾರ್ಕಳ: ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಶಾಕ್: ಮೆಸ್ಕಾಂ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

- Advertisement -
- Advertisement -

ಕಾರ್ಕಳ: ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಲೈನ್ ಮ್ಯಾನ್ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕಾರ್ಕಳ ತಾಲೂಕಿನ ನೂರಾಳ್’ಬೆಟ್ಟು ಎಂಬಲ್ಲಿ ನಿನ್ನೆ ಸಂಜೆ ಸಂಭವಿಸಿದೆ.

ಬಾಗಲಕೋಟ ಮೂಲದ ಶ್ರೀನಿವಾಸ್ (28) ಮೃತಪಟ್ಟ ದುರ್ದೈವಿ.

ಶ್ರೀನಿವಾಸ್ ಹೊಸ್ಮಾರು ಶಾಖೆಯಲ್ಲಿ ಲೈನ್ ಮ್ಯಾನ್ ಆಗಿದ್ದರು.
ನೂರಾಳ್ ಬೆಟ್ಟು ಪರಿಸರದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಡಚಣೆಯಾಗಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಶ್ರೀನಿವಾಸ್ ಟ್ರಾನ್ಸ್‌ಫಾರ್ಮರ್ ಫ್ಯೂಸ್ ದುರಸ್ತಿಗೆ ತೆರಳಿದ್ದರು. ಈ ದುರ್ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದ್ದು,ದುರಸ್ತಿ ಸಂದರ್ಭದಲ್ಲಿ ಹೈಟೆನ್ಷನ್ ವಯರಿ‌ನಿಂದ ಏಕಾಎಕಿ ವಿದ್ಯುತ್ ಪ್ರವಹಿಸಿ ವಿದ್ಯುತ್ ಶಾಕ್ ‌ನಿಂದ ಮೃತಪಟ್ಟಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ.ಅಲ್ಲದೇ ಮೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಅಮಾಯಕ ಬಲಿಯಾದನೇ ಎನ್ನುವ ಅನುಮಾನ ಮೂಡಿದೆ.

ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ

ಆಸ್ಪತ್ರೆಗೆ ಮಾಜಿ ಸಚಿವ ಸುನಿಲ್ ಕುಮಾರ್ ಭೇಟಿ
ಮೆಸ್ಕಾಂ ಸಿಬ್ಬಂದಿ ಶ್ರೀನಿವಾಸ್ ಸಾವಿನ ಸುದ್ದಿ ತಿಳಿದ ತಕ್ಷಣವೇ ಶಾಸಕ ಹಾಗೂ ಮಾಜಿ ಇಂಧನ ಸಚಿವ ಸುನಿಲ್ ಕುಮಾರ್ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮೆಸ್ಕಾಂ ಅಧಿಕಾರಿಗಳಿಂದ ಘಟನೆಯ ಕುರಿತ ಪ್ರಾಥಮಿಕ ಮಾಹಿತಿ ಪಡೆದುಕೊಂಡಿದ್ದು, ಈ ದುರ್ಘಟನೆಗೆ ಕಾರಣ ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸೂಚಿಸಿದರು.

- Advertisement -

Related news

error: Content is protected !!