Monday, July 27, 2026
spot_imgspot_img
spot_imgspot_img

ಕಾಡಾನೆ ಸಾವಿಗೆ ಮೆಸ್ಕಾಂ ಮತ್ತು ಅರಣ್ಯ ಇಲಾಖೆ ನೇರ ಹೊಣೆ.!ಮುಂದೆ ಇಂತಹ ಘಟನೆ ಮರುಕಳಿಸಿದರೆ ಇಲಾಖೆಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು- ಶಶಿಧರ್ ಶೆಟ್ಟಿ.

- Advertisement -
- Advertisement -

ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಅರಣ್ಯ ವಲಯ ವ್ಯಾಪ್ತಿಯ ಕೊಂಬಾರು ಗ್ರಾಮದ ಬಿಳಿನೆಲೆ  ಸಮೀಪದ ಪುತ್ತಿಲ ಎಂಬಲ್ಲಿ ವಿದ್ಯುತ್ ತಂತಿ ತಗುಲಿ ಕಾಡಾನೆ ಮೃತಪಟ್ಟಿದ್ದು ಮೆಸ್ಕಾಂ ಇಲಾಖೆಯ ಮತ್ತು ಅರಣ್ಯ ಇಲಾಖೆಯ ನಿರ್ಲಕ್ಷ್ಯ ಎಂಬುದಾಗಿ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದಿಂದ ಆರೋಪ ವ್ಯಕ್ತವಾಗಿದೆ.

ಯಾವುದೇ ಅರಣ್ಯ ಇಲಾಖೆಯ ಜಾಗದಲ್ಲಿ ಹಾದು ಹೋಗುವ ವಿದ್ಯುತ್ ಲೈನ್ ಗಳಿಗೆ ಸುರಕ್ಷಾ ಕವಚ ಹಾಕದಿರುವುದೇ ಕಾಡಾನೆ ಬಲಿಯಾಗಲು ಕಾರಣವಾಗಿದೆ ಎಂದು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಆರೋಪಿಸಿದ್ದಾರೆ. ಮುಂದೆ ಇಂತಹ ಘಟಕಗಳು ಮರುಕಳಿಸಿದರೆ ಮೆಸ್ಕಾಂ ಮತ್ತು ಅರಣ್ಯ ಇಲಾಖೆಯನ್ನು ಹೊಣೆಯಾಗಿಸಿ ಇವರ ವಿರುದ್ದ ಕೇಸು ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಈ  ಇಲಾಖೆಗಳ ವಿರುದ್ಧ ಹೈಕೋರ್ಟಿನಲ್ಲಿ ಪಿ ಐ ಎಲ್ ಹಾಕಲಾಗುವುದು ಎಂದಿದ್ದಾರೆ.

ಮಾತ್ರವಲ್ಲದೆ ಈ ಕಾಡಾನೆ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ನಡೆಸಿ ಕೃತ್ಯಕ್ಕೆ ಕಾರಣವಾದ ಇಲಾಖೆ ಅಥವಾ ಸಿಬ್ಬಂದಿಗಳ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂಬ ಒತ್ತಾಯವು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ಮುಂದಕ್ಕೆ ಈ ರೀತಿಯ ಘಟನೆ ಮತ್ತೆ ಮರುಕಳಿಸಬಾರದು ಎಂಬ ಎಚ್ಚರಿಕೆಯ ಸಂದೇಶವನ್ನು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟವು ನೀಡಿದೆ.

- Advertisement -

Related news

error: Content is protected !!