Monday, July 20, 2026
spot_imgspot_img
spot_imgspot_img

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ

- Advertisement -
- Advertisement -

ನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ (31) ಅವರಿಗೆ ಕುಟುಂಬಸ್ಥರು ಭಾವನಾತ್ಮಕ ವಿದಾಯ ಹೇಳಿದ್ದಾರೆ. ಚಲನರಹಿತವಾಗಿ ಏಮ್ಸ್‌ ಆಸ್ಪತ್ರೆಯಲ್ಲಿ ಮಲಗಿದ್ದ ಅವರ ಬೆಡ್‌ ಸುತ್ತ ನಿಂತ ಕುಟುಂಬಸ್ಥರು ʻನೀನು ಹೊರಡೋ ಸಮಯ, ಎಲ್ಲರನ್ನೂ ಕ್ಷಮಿಸುʼಎಂದು ಮನವಿ ಮಾಡಿಕೊಂಡಿದ್ದಾರೆ.

ರಾಣಾ ಅವರ ಕುಟುಂಬವು ಅವರೊಂದಿಗೆ ತಮ್ಮ ಕೊನೆಯ ಕ್ಷಣಗಳನ್ನು ಕಳೆಯುತ್ತಿರುವ 22 ಸೆಕೆಂಡ್‌ಗಳ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವೀಡಿಯೋದಲ್ಲಿ ರಾಣಾ ಅವರ ತಾಯಿ ಪಕ್ಕದಲ್ಲಿ ಭಾವುಕರಾಗಿ ಕುಳಿತಿದ್ದರು. ಬ್ರಹ್ಮ ಕುಮಾರಿ ಸಹೋದರಿಯೊಬ್ಬರು ಅವರ ಹಣೆಯ ಮೇಲೆ ತಿಲಕ ಹಚ್ಚಿ, ಎಲ್ಲರನ್ನೂ ಕ್ಷಮಿಸಿ, ಈಗ ಹೊರಡುವ ಸಮಯ ಎಂದು ತಲೆಯನ್ನು ಸವರುತ್ತಾ ಹೇಳಿರುವುದು ಸೆರೆಯಾಗಿದೆ.

ಕುಟುಂಬಸ್ಥರ ಅಂತಿಮ ವಿದಾಯದ ಬಳಿಕ ವೈದ್ಯರು ಕ್ರಮೇಣ ಅವರ ಜೀವರಕ್ಷಕ ಸಾಧನಗಳನ್ನು ಹಿಂತೆಗೆದುಕೊಂಡಿದ್ದಾರೆ. ಮಾ. 11 ರಂದು 2013ರಿಂದ ಕೋಮಾದಲ್ಲಿದ್ದ ರಾಣಾ ಅವರ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ ಒಪ್ಪಿಗೆ ಸೂಚಿಸಿತ್ತು. ಇದು ದೇಶದಲ್ಲಿ ಮೊದಲನೆಯ ದಯಾಮರಣ ಪ್ರಕರಣವಾಗಿದೆ.

2013 ರಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದ ನಂತರ ರಾಣಾ ಅವರ ಮೆದುಳಿಗೆ ಹಾನಿಯಾಗಿತ್ತು. ಅಂದಿನಿಂದ, ಅವರು ಜೀವ ರಕ್ಷಕಗಳ ಬೆಂಬಲದಲ್ಲಿದ್ದರು. ಉಸಿರಾಟಕ್ಕಾಗಿ ಟ್ರಾಕಿಯೊಸ್ಟೊಮಿ ಟ್ಯೂಬ್ ಮತ್ತು ಆಹಾರಕ್ಕಾಗಿ ಗ್ಯಾಸ್ಟ್ರೋಜೆಜುನೊಸ್ಟೊಮಿ ಟ್ಯೂಬ್ ಬಳಸಲಾಗುತ್ತಿತ್ತು. ಬಳಿಕ ರಾಣಾ ಅವರ ಪೋಷಕರು ಅವರಿಗೆ ದಯಾಮರಣ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಅಂತಿಮವಾಗಿ ಸುಪ್ರೀಂ ಕೋರ್ಟ್ ಅನುಮತಿ ನೀಡಿತ್ತು.

- Advertisement -

Related news

error: Content is protected !!