- Advertisement -
- Advertisement -
ವಿಟ್ಲ: ಸರಕಾರಿ ನಿವೇಶನಕ್ಕೆ ಮೀಸಲಿಟ್ಟ ಜಮೀನನ್ನು ಮೂವರು ಖಾಸಗಿ ವ್ಯಕ್ತಿಗಳು ಅತಿಕ್ರಮಿಸಿದ ಘಟನೆ ಕೊಳ್ನಾಡು ಗ್ರಾಮದ ತಾಳಿತ್ತನೂಜಿ-ನಾರ್ಶ ವಾರ್ಡಿನ ಮರಕಡಬೈಲು ಎಂಬಲ್ಲಿ ನಡೆದಿದೆ.
ಈ ಬಗ್ಗೆ ಮಾಹಿತಿ ಪಡೆದ ಕೊಳ್ನಾಡು ಗ್ರಾಮ ಪಂ.ಮಾಜಿ ಅಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರು ತಕ್ಷಣವೇ ಪೊಲೀಸರನ್ನು ಸ್ಥಳಕ್ಕೆ ಕರೆಯಿಸಿ ಪಂ.ಉಪಾಧ್ಯಕ್ಷೆ ಅಸ್ಮಾ ಹಸೈನಾರ್ ತಾಳಿತ್ತನೂಜಿ ಮತ್ತು ಪಂ.ಸಿಬ್ಬಂದಿಗಳ ಸಮ್ಮುಖದಲ್ಲಿ ಅತಿಕ್ರಮಣ ಮಾಡುತ್ತಿದ್ದ ವ್ಯಕ್ತಿಗಳ ವಿರುದ್ಧ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ.
ಸದ್ಯ ಅತಿಕ್ರಮಣ ಕಾಮಗಾರಿಯನ್ನು ಪೊಲೀಸರು ತಡೆದಿದ್ದು ಅತಿಕ್ರಮಣಕಾರರು ವಿರುದ್ಧ ಮುಂದಿನ ಕಾನೂನು ಕ್ರಮ ಜರುಗಿಸಲು ಸಿದ್ಧತೆ ನಡೆಸಿದ್ದಾರೆ.
- Advertisement -