Sunday, June 29, 2025
spot_imgspot_img
spot_imgspot_img

ವಿಟ್ಲ : ಮಳೆಯ ಅಬ್ಬರ ಕಡಿಮೆಯಾಗಿದ್ಜರೂ ವಿಟ್ಲ ಸುತ್ತಮುತ್ತ ಮುಂದುವರಿದ ಗುಡ್ಡ ಕುಸಿತ, ಮನೆ ಕುಸಿತ : ಮರಕ್ಕಿಣಿಯಲ್ಲಿ ಅಪಾಯ ಸ್ಥಿತಿಯಲ್ಲಿರುವ ನೀರಿನ ಟ್ಯಾಂಕ್ : ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ ನೀಡಿ ಪರಿಶೀಲನೆ

- Advertisement -
- Advertisement -

ವಿಟ್ಲ-ಪುತ್ತೂರು ರಸ್ತೆಯ ಕಂಬಳಬೆಟ್ಟು ಶಾಂತಿನಗರ ಎಂಬಲ್ಲಿ ನಿಝಾಂ ಎಂಬವರ ಮನೆ ಭಾರೀ ಮಳೆಯ ಕಾರಣದಿಂದಾಗಿ ಸಂಪೂರ್ಣ ಕುಸಿತವಾಗಿದೆ. ಮನೆ ಕುಸಿಯುತ್ತಲೇ ಮನೆಯೊಳಗಿದ್ದವರು ಹೊರಗಡೆ ಓಡಿ ಹೋದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅದೇ ರೀತಿ ವಿಟ್ಲ ಹೊರವಲಯದ ಅಡ್ಯನಡ್ಕ ಮರಕ್ಕಿಣಿ ಎಂಬಲ್ಲಿನ ಗುಡ್ಡದ ಮೇಲಿದ್ದ ಸಾರ್ವಜನಿಕ ಕುಡಿಯುವ ನೀರಿನ ಶೇಖರಣ ಟ್ಯಾಂಕ್ ಅಡಿಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿದಿದೆ. ಯಾವುದೇ ಕ್ಷಣದಲ್ಲೂ ಟ್ಯಾಂಕ್ ಸಂಪೂರ್ಣ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಎರಡೂ ಕಡೆಗಳಿಗೆ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸೂಕ್ತ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ಜಾರೆ.

- Advertisement -

Related news

error: Content is protected !!