Sunday, June 29, 2025
spot_imgspot_img
spot_imgspot_img

ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರು ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನ, ಜೀವಬೆದರಿಕೆ ಪೋಸ್ಟ್‌…!

- Advertisement -
- Advertisement -

ಆರೋಪಿ ರೌಡಿ ಶೀಟರ್ ಪ್ರಜ್ವಲ್ ರೈ ಪಾತಾಜೆ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರು ಅವರ ಬಗ್ಗೆ ಪ್ರಜ್ವಲ್‌ ರೈ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಚೇರಿಯಲ್ಲಿ ತುರ್ತು ಸಭೆ ನಡೆದು ಬಳಿಕ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದರು.

ಮೇ.17 ರಂದುಕೋಟಿ ಚೆನ್ನಯ ಕಂಬಳ ಪುತ್ತೂರು ಎಂಬ ವಾಟ್ಸಪ್‌ ಗ್ರೂಪಿನಲ್ಲಿ ಪ್ರಜ್ವಲ್‌ ರೈ ಎಂಬಾತನಿಂದ ಅವಹೇಳನಕಾರಿ ಬರಹ ದ ಮುಖಾಂತರ ರೋಡಿನಲ್ಲಿ “ಕಲ್ಲೇಟು ಬೀಳುವುದು ಖಚಿತ ” ಎಂಬುದಾಗಿ ಜೀವ ಬೆದರಿಕೆಯನ್ನು ಹಾಕಿರುತ್ತಾನೆ.

ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ರವರ ನೇತೃತ್ವದ ನಿಯೋಗವು ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಶೀಘ್ರ ಆರೋಪಿಯನ್ನು ಬಂಧಿಸುವಂತೆ ಮನವಿ ಮಾಡಿದ್ದರು.
ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಐಪಿಸಿ 1860 (U/S- 504,506) ರಂತೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!