Monday, April 29, 2024
spot_imgspot_img
spot_imgspot_img

ಮಾಜಿ ಸೈನಿಕನಿಂದ ಯುವಕನ ಕೊಲೆ..!

- Advertisement -G L Acharya panikkar
- Advertisement -

ಇಬ್ಬರು ಗೆಳೆಯರ ನಡುವೆ ಕಲಹ ಏರ್ಪಟ್ಟು ಕೊಲೆಯಲ್ಲಿ ಅಂತ್ಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಂ.4ರಲ್ಲಿ ನಡೆದಿದೆ.

ಜಮಯಾಂಗ್ ಡಾಕ್ಪಾ ಯಾನೆ ಲೋಬ್ಸಂಗ್ (35) ಕೊಲೆಯಾದ ಯುವಕ. ಗೊನಪೊ ತಿನ್ಲೆ ಚೊಡೆಕ್(50) ಕೊಲೆಮಾಡಿದ ವ್ಯಕ್ತಿಯಾಗಿದ್ದು, ಈತ ಭಾರತೀಯ ಸೈನ್ಯದಲ್ಲಿ ಸೈನಿಕನಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತನಾಗಿದ್ದನು. ಮಂಗಳವಾರ ತಡರಾತ್ರಿ ಇಬ್ಬರ ನಡುವೆ ಜಗಳ ನಡೆದಿದ್ದು, ಚಾಕುವಿನಿಂದ ಇಬ್ಬರೂ ಒಬ್ಬರಿಗೊಬ್ಬರು ಹಲ್ಲೆ ಮಾಡಿಕೊಂಡಿದ್ದಾರೆ. ಈ ವೇಳೆ ಜಮಯಾಂಗ್ ಡಾಕ್ಪಾ ಯಾನೆ ಲೋಬ್ಸಂಗ್ ಚಾಕು ಇರಿತಕ್ಕೆ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಕೊಲೆ ಮಾಡಿದ ಗೊನಪೊ ತಿನ್ಲೆ ಚೊಡೆಕ್ ಗಂಭೀರ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಹತ್ಯೆ ಮಾಡಿರುವ ಆರೋಪಿ ಮಾಜಿ ಸೈನಿಕನಾಗಿದ್ದಾನೆ. ಹತ್ಯೆಗೆ ಕಾರಣ ಸ್ಪಷ್ಟವಾಗಿಲ್ಲ. ಮುಂಡಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!