- Advertisement -
- Advertisement -
ಬೆಂಗಳೂರು: ಕುಖ್ಯಾತ ಮನೆಗಳ್ಳ ‘ಎಸ್ಕೇಪ್ ಕಾರ್ತಿಕ್ ‘ ಮೇಲೆ ಸ್ನೇಹಿತರೇ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ನಗರದ ಕೊತ್ತನೂರು ನಗರದ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಕಾರ್ತಿಕ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಗಳ್ಳನಾದ ಕಾರ್ತಿಕ್ ಸ್ನೇಹಿತ ರಾಜ್ ಕುಮಾರ್ ಎಂಬಾತನ ಸಹೋದರಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಕಳೆದ ಐದು ವರ್ಷಗಳ ಹಿಂದೆ ಹೆಣ್ಣೂರಿನಲ್ಲಿ ಕಾರ್ತಿಕ್ ಗೆ ರಾಜ್ ಕುಮಾರ್ ಪರಿಚಯವಾಗಿತ್ತು. ಆಗಾಗ ಸ್ನೇಹಿತನ ಮನೆಗೆ ಹೋಗಿ ಬರುತ್ತಿದ್ದ ಕಾರ್ತಿಕ್ ಹಾಗೂ ರಾಜ್ ಕುಮಾರ್ ಸಹೋದರಿ ನಡುವೆ ಪ್ರೇಮಾಂಕುರವಾಗಿತ್ತು.
- Advertisement -