- Advertisement -
- Advertisement -


ತಮಿಳುನಾಡು: ತಮಿಳುನಾಡಿನ ವಿರುದುನಗರ ಜಿಲ್ಲೆಯ ಸತ್ತೂರು ಪ್ರದೇಶದಲ್ಲಿ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 6 ಮಂದಿ ಕಾರ್ಮಿಕರು ಮೃಯತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಸಿಬ್ಬಂದಿ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕಾರ್ಖಾನೆ ಪರವಾನಗಿ ಹೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಸಾಯನಿಕಗಳನ್ನು ಬೆರೆಸುವ ಪ್ರಕ್ರಿಯೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಮೇ 9 ರಂದು ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ್ದ ಭಾರೀ ಸ್ಫೋಟದಲ್ಲಿ 8 ಮಂದಿ ಸಾವನ್ನಪ್ಪಿದ್ದರು.
- Advertisement -