- Advertisement -
- Advertisement -
ಮಂಗಳೂರು: ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಕೇಂದ್ರ ಸರಕಾರ 4 ಲಕ್ಷ ರೂಪಾಯಿ ಸಹಾಯ ಧನ ಪ್ರಕಟಿಸಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶ ಸುಳ್ಳು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ರವರು ಸ್ಪಷ್ಟ ಪಡಿಸಿದ್ದಾರೆ.
ಕೋವಿಡ್ 19ನಿಂದ ಮೃತಪಟ್ಟ ಕುಟುಂಬದವರಿಗೆ ಕೇಂದ್ರ ಸರ್ಕಾರ 4 ಲಕ್ಷ ರೂಪಾಯಿ ಸಹಾಯ ಧನ ಪ್ರಕಟಿಸಿದೆ. ಇದನ್ನು ಪಡೆಯಲು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿನ ನಮೂನೆ ಈ PDF ಫೈಲ್ ನಲ್ಲಿದೆ.
ಈ ವಿಷಯ ಎಲ್ಲಾರಿಗೂ ತಲುಪಿಸಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ರವಾನೆಯಾಗುತ್ತಿದೆ. ಜತೆಗೆ, ಪಿಡಿಎಫ್ ಫೈಲ್ ರವಾನಿಸಲಾಗುತ್ತಿದೆ. ಈ ಬಗ್ಗೆ ಮಾಹಿತಿ ಕೇಳಿದಾಗ ಇದು ಸುಳ್ಳು ಸಂದೇಶ ಎಂದು ಜಿಲ್ಲಾಧಿಕಾರಿಯವರು ಸ್ಪಷ್ಟ ಪಡಿಸಿದ್ದಾರೆ.
- Advertisement -