Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಬೆಳ್ತಂಗಡಿ: ವ್ಯಕ್ತಿಯೊಬ್ಬರು ಮನೆಯ ಸಮೀಪದ ಮರದಿಂದ ದೀವಿಹಲಸು(ಜೀಗುಜ್ಜೆ) ಕೀಳುತ್ತಿದ್ದ ವೇಳೆ ಜಾರಿ ಬಿದ್ದು ಕಲ್ಲಿಗೆ ತಲೆ ತಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಮಲವಂತಿಗೆ ಗ್ರಾಮದ ದಿಡುಪೆ ಸಮೀಪ ಸಿಂಗನಾರುವಿನಲ್ಲಿ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಸಿಂಗನಾರು ನಿವಾಸಿ ಶ್ರೀನಿವಾಸ (47) ಎಂದು ಗುರುತಿಸಲಾಗಿದೆ.

ಮನೆಯಿಂದ ಹೊರಗೆ ಹೋದ ಇವರು ಹಿಂತಿರುಗಿ ಬಾರದ ಹಿನ್ನಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದಾಗ ತೋಟದ ಬದಿಯಲ್ಲಿ ಮರದ ಕೆಳಗೆ ಗಂಭೀರವಾಗಿ ಗಾಯಗೊಂಡು ಬಿದ್ದಿರುವುದು ಕಂಡುಬಂದಿದೆ. ತಲೆಗೆ ಗಂಭೀರವಾಗಿ ಗಾಯವಾಗಿದ್ದು ದೀವಿಹಲಸು ಕೀಳುವ ವೇಳೆ ಇವರು ಕಾಲು ಜಾರಿ ಬಿದ್ದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.
ಕೂಡಲೇ ಅವರನ್ನು ಆಸ್ಪತ್ರೆಗೆ ತಂದರೂ ಆವೇಳೆಗೆ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!