- Advertisement -
- Advertisement -
ಕೌಟುಂಬಿಕ ಸಮಸ್ಯೆಯಿಂದ ಹಿಂಸೆ ಅನುಭವಿಸುತ್ತಿದ್ದ ಮಹಿಳೆಯೊಬ್ಬಳು ತನ್ನ ಇಬ್ಬರು ಹೆಣ್ಣುಮಕ್ಕಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ರಾಯಬಾಗ ತಾಲೂಕಿನಲ್ಲಿ ನಡೆದಿದೆ.
ಸರಸ್ವತಿ ಕಿರವೆ (26) ಎಂಬವರು ಮದುವೆಯಾದ ದಿನದಿಂದಲೇ ಹಿಂಸೆಯನ್ನು ಅನುಭವಿಸುತ್ತಿದ್ದರು. ಇಬ್ಬರು ಹೆಣ್ಣುಮಕ್ಕಳು ಹುಟ್ಟಿದ ಮೇಲು ಕಿರುಕುಳ ನಿಲ್ಲಿಸದ ಗಂಡನೊಂದಿಗೆ ಸಂಸಾರ ಮಾಡಲಾಗದೇ ತವರು ಮನೆಗೆ ಬಂದಿದ್ದರು. ತವರು ಮನೆಯಲ್ಲೇ ಇರುವ ಕಾರಣದಿಂದ ಆಕೆಯ ಮಾನಸಿಕವಾಗಿ ಬಹಳಷ್ಟು ಕುಗ್ಗಿ ಹೋಗಿದ್ದು, ಈ ಆತ್ಮಹತ್ಯೆ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಕೌಟುಂಬಿಕ ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿದ್ದ ಆಕೆ ದೀಪಿಕಾ (7) ಹಾಗೂ ರಿತಿಕಾ (4) ಎಂಬ ಇಬ್ಬರು ಹೆಣ್ಣು ಮಕ್ಕಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ.
ಘಟನಾ ಸ್ಥಳಕ್ಕೆ ಹಾರೂಗೇರಿ ಪೊಲೀಸರ ಭೇಟಿ ನೀಡಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಮನೆಯವರನ್ನು ಹಾಗೂ ಆಕೆಯ ಗಂಡನನ್ನು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
- Advertisement -