- Advertisement -
- Advertisement -






ಫರಂಗಿಪೇಟೆ: ರಸ್ತೆ ದಾಟುತ್ತಿದ್ದಾಗ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಆಟೋ ಚಾಲಕನೊಬ್ಬ ಸಾವನ್ನಪ್ಪಿದ ಘಟನೆ ಘಟನೆ ಫರಂಗಿಪೇಟೆ ಹತ್ತನೇ ಮೈಲ್ಕಲ್ಲು ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಅಮೆಮ್ಮಾರ್ ನಿವಾಸಿ ಪ್ರಸ್ತುತ ಹತ್ತನೇ ಮೈಲ್ ಕಲ್ಲು ಫ್ಲಾಟ್ ನಲ್ಲಿರುವ ಝಾಹಿದ್ (28) ಎಂದು ಗುರುತಿಸಲಾಗಿದೆ.
ಆಟೋ ಚಾಲಕನಾಗಿದ್ದ ಈತ ರಸ್ತೆ ದಾಟಲು ಹೆದರುತ್ತಿದ್ದ ಮಕ್ಕಳನ್ನು ರಸ್ತೆ ದಾಟಿಸಿ ಹಿಂದಿರುಗುವವಷ್ಟರಲ್ಲಿ ಮಂಗಳೂರಿನಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ ಝಾಹಿದ್ ಮೃತಪಟ್ಟಿದ್ದಾರೆ.
ಮೃತ ಯುವಕ ತಾಯಿ ಹಾಗೂ ಮೂರು ಸಹೋದರರು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
- Advertisement -