Tuesday, April 30, 2024
spot_imgspot_img
spot_imgspot_img

ಸಾಲ ಭಾದೆಯಿಂದ ಬಾವಿಗೆ ಹಾರಿ ರೈತ ಆತ್ಮಹತ್ಯೆ..!

- Advertisement -G L Acharya panikkar
- Advertisement -

ರೈತ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್‌ ಜಿಲ್ಲೆಯ ಔರದ್‌ ತಾಲ್ಲೂಕಿನ ಮುಸ್ತಾಪುರ ಗ್ರಾಮದಲ್ಲಿ ‌ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ರೈತ ಉಮೇಶ ಹುಲ್ಲೆಪ್ಪ (45) ಎಂದು ಗುರುತಿಸಲಾಗಿದೆ.

ಮೃತ ರೈತನಿಗೆ ಹೆಂಡತಿ, ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಗಂಡು ಮಗ ಇದ್ದಾನೆ. ಲಾಧಾ ಪಿಕೆಪಿಎಸ್‌ನಿಂದ ₹1 ಲಕ್ಷ ಹಾಗೂ ಖಾಸಗಿ ಬ್ಯಾಂಕನಿಂದ ₹2 ಲಕ್ಷ ಸಾಲ ಮಾಡಿದ್ದರು. ಸಾಲದ ಹೊರೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಮೃತರ ಹೆಂಡತಿ ಜಗದೇವಿ ನೀಡಿದ ದೂರಿನ ಮೇರೆಗೆ ಸಂತಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸ್ಥಳೀಯರ ಸಹಾಯದಿಂದ ಮೃತದೇಹ ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

- Advertisement -

Related news

error: Content is protected !!