Friday, March 29, 2024
spot_imgspot_img
spot_imgspot_img

ರೈತರ ಬ್ಯಾಂಕ್ ಖಾತೆಗೆ 4 ಸಾವಿರ ರೂ. ವರ್ಗಾವಣೆ: ಶಿವರಾಜ್ ಸಿಂಗ್ ಚೌಹಾಣ್

- Advertisement -G L Acharya panikkar
- Advertisement -

ಭೋಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯ ಸರ್ಕಾರದ ವತಿಯಿಂದ 4 ಸಾವಿರ ರೂ.ಗಳನ್ನು ನೇರ ರೈತರ ಖಾತೆಗೆ ಎರಡು ಕಂತುಗಳಲ್ಲಿ ವರ್ಗಾವಣೆ ಮಾಡುವುದಾಗಿ ಘೋಷಿಸಿದ್ದಾರೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮನ್ ನಿಧಿ ಯೋಜನೆಯಡಿ ದಾಖಲಿಸಿಕೊಂಡಿರುವ ರೈತರಿಗೆ ಯೋಜನೆಯ ಲಾಭ ದೊರೆಯಲಿದೆ. ರೈತರ ಒಟ್ಟಾರೆ ಅಭಿವೃದ್ಧಿಗಾಗಿ ಕಿಸಾನ್ ಸಮ್ಮನ್ ನಿಧಿ, ಶೂನ್ಯ ಬಡ್ಡಿ ದರದಲ್ಲಿ ಸಾಲ ಮತ್ತು ಪ್ರಧಾನಿ ಬೆಳೆ ವಿಮೆ ಮುಂತಾದ ಯೋಜನೆಗಳೊಂದಿಗೆ ರೈತರ ಹಿತದೃಷ್ಟಿಯಿಂದ ನಡೆಸಬೇಕೆಂದು ಈ ಎಲ್ಲಾ ಯೋಜನೆಗಳನ್ನು ವಿಶೇಷ ಪ್ಯಾಕೇಜ್ ಆಗಿ ಅನುಷ್ಠಾನ ಮಾಡುತ್ತೇವೆ ಎಂದು ಸಿಎಂ ಚೌಹಾಣ್ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರೈತ ಕಲ್ಯಾಣ ಯೋಜನೆಯನ್ನು ರಾಜ್ಯದಲ್ಲಿ ಪ್ರಾರಂಭಿಸಲಾಗುತ್ತಿದೆ. ಯೋಜನೆಯ ಅಡಿ ರೈತರಿಗೆ ವಾರ್ಷಿಕವಾಗಿ 4 ಸಾವಿರ ರೂ. ಪಾವತಿಸಲಾಗುವುದು. ರೈತರ ಕಲ್ಯಾಣ ನನ್ನ ಜೀವನದ ಗುರಿಯಾಗಿದೆ ಎಂದು ಚೌಹಾಣ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!