Sunday, June 29, 2025
spot_imgspot_img
spot_imgspot_img

ಸುಳ್ಯ: ಮಗನಿಂದ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ್ದ ತಂದೆ ಮಹಡಿಯಿಂದ ಹಾರಿ ಆತ್ಮಹತ್ಯೆ !*

- Advertisement -
- Advertisement -

ಸುಳ್ಯ: ಮಗನಿಂದ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ್ದ ತಂದೆಯೊಬ್ಬರು ಆಸ್ಪತ್ರೆಯ‌ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಸರಗೋಡು ಬಂದ್ಯಡ್ಕದ ಲಕ್ಷ್ಮಣ ಗೌಡ ಆತ್ಮಹತ್ಯೆಗೆ ಶರಣಾದವರು. ಅಪ್ಪ-ಮಗನ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದು, ಆಗ ಮಗ ಅಪ್ಪನಿಗೆ ಬಿದಿರಿನ ಸಲಾಕೆಯಿಂದ ಹೊಡೆದಿದ್ದ. ಈ ವೇಳೆ ತೀವ್ರ ಗಾಯಗೊಂಡ ಲಕ್ಷ್ಮಣ ಗೌಡ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಡಿ.18 ರ ರಾತ್ರಿ ಅವರ ಅಳಿಯ ಊಟ ತರಲೆಂದು ಹೋದ ವೇಳೆ ಆಸ್ಪತ್ರೆ ಕಟ್ಟಡದಿಂದ ಹಾರಿದ್ದಾರೆ. ಈ ವೇಳೆ ಗಂಭೀರ ಗಾಯಗೊಂಡಿದ್ದ ಲಕ್ಷ್ಮಣ ಗೌಡರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಗನ ಇತ್ತೀಚಿನ ವರ್ತನೆಯಿಂದ ನೊಂದಿದ್ದ ಲಕ್ಷ್ಮಣ ಗೌಡ ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸುಳ್ಯ ಪೋಲಿಸರು ಶಂಕೆ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!